ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿನ ಪೂರ್ವಸಿದ್ಧತೆ
Preparations for the monsoon season by the Agriculture Department
ಕೊಪ್ಪಳ 08: ಕೃಷಿ ಇಲಾಖೆಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಲಾಗಿದೆ ಕೊಪ್ಪಳ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ತಿಳಿಸಿದ್ದಾರೆ.
ಈ ವರ್ಷದ ಮುಂಗಾರು ಹಂಗಾಮಿಗಾಗಿ ಕೃಷಿ ಇಲಾಖೆಯು ಪೂರ್ವಸಿದ್ಧತೆ ಕೈಗೊಂಡಿದ್ದು, ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯ ನಿಟ್ಟಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಗುಣನಿಯಂತ್ರಣ ಸಪ್ತಾಹವನ್ನು ಮೇ 5 ರಿಂದ ಮೇ 9ರ ವರೆಗೆ ಆಚರಿಸಲಾಗುತ್ತಿದೆ. ಈ ಸಪ್ತಾಹದ ಅಂಗವಾಗಿ ಉಪ ಕೃಷಿ ನಿರ್ದೇಶಕರು-1 ಅವರ ನೇತೃತ್ವದಲ್ಲಿ ತಂಡಗಳನ್ನು ರಚಿಸಿ, ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮಾರಾಟ ಮಳಿಗೆಗಳಿಗೆ ತಪಾಸಣೆ ನಡೆಸುತ್ತಿದ್ದಾರೆ.
ಈ ವರೆಗೆ 159 ಮಳಿಗೆಗಳಿಗೆ ಭೇಟಿ ನೀಡಲಾಗಿದ್ದು, 79 ಬೀಜ ಮಾದರಿಗಳು, 123 ರಸಗೊಬ್ಬರ ಮಾದರಿಗಳು ಮತ್ತು 67 ಕೀಟನಾಶಕ ಮಾದರಿಗಳನ್ನು ತೆಗೆದು ಗುಣಮಟ್ಟ ಪರೀಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 