ಸಿಎಂ ಭೇಟಿ ಹಿನ್ನೆಲೆಯಲ್ಲಿ ಎಲಿಪ್ಯಾಡ್ ನಿರ್ಮಾಣಕ್ಕೆ ಸಿದ್ಧತೆ

ಸಿಎಂ ಭೇಟಿ ಹಿನ್ನೆಲೆಯಲ್ಲಿ ಎಲಿಪ್ಯಾಡ್ ನಿರ್ಮಾಣಕ್ಕೆ ಸಿದ್ಧತೆ  Preparations underway for helipad construction ahead of CM's visit


ಲಕ್ಷ್ಮೇಶ್ವರ 31: ಸೆ.1ರಂದು ಗದಗ ಜಿಲ್ಲೆಯಲ್ಲಿ ಬರ ಅಧ್ಯಯನ ಪರೀಶೀಲನೆಗಾಗಿ ಲಕ್ಷ್ಮೇಶ್ವರ ನಗರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲಕ್ಷ್ಮೇಶ್ವರದ ಮುಕ್ತಿಮಂದಿರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಗರದ ಉಮಾ ವಿದ್ಯಾಲಯ ಹೈಸ್ಕೂಲ್ ಮೈದಾನದಲ್ಲಿ ಎಲಿಪ್ಯಾಡ್ ನಿರ್ಮಾಣಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ.  

ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಧನಂಜಯ ಎಂ. ಮಾಲಗಿತ್ತಿ, ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಗುಡದಾರಿ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಮಂಜುನಾಥ ಮುದುಗಲ್ ಹಾಗೂ ಕಂದಾಯ ನೀರೀಕ್ಷಕ ನದಾಫ್ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಿದ್ಧತಾ ಕಾರ್ಯಗಳನ್ನು ಪರೀಶೀಲಿಸಿದರು.