ಸಂಭಾವ್ಯ ಪ್ರವಾಹ ಎದುರಿಸಲು ಸಜ್ಜಾಗಿ
ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಚಿಕ್ಕೋಡಿ ಎಸಿ..!
ಕಾಗವಾಡ 27: ತಾಲೂಕಿನಲ್ಲಿ ಸಂಭಾವ್ಯ ಪ್ರವಾಹ ಎದುರಿಸಿ, ಮುಂಜಾಗ್ರತ ಕ್ರಮ ಕೈಗೊಂಡು, ಆಗತಕ್ಕ ಹಾನಿಯನ್ನು ತಪ್ಪಿಸಲು ತಾಲೂಕಿನ ಎಲ್ಲ ಅಧಿಕಾರಿಗಳು ಶ್ರಮಿಸಬೇಕು. ಪ್ರವಾಹ ಭೀತಿ ಇರುವ ಗ್ರಾಮಗಳಿಗೆ ನೊಡಲ್ ಅಧಿಕಾರಿಗಳನ್ನು ಈಗಾಗಲೇ ನೇಮಿಸಲಾಗಿದ್ದು, ಪ್ರತಿಯೊಬ್ಬರು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕೆಂದು ಚಿಕ್ಕೋಡಿ ಉಪವಿಭಾಗಾಧಿಕಾರಿ ಎಸ್.ಎಸ್. ಸಂಪಗಾಂವಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅವರು, ಮಂಗಳವಾರ ದಿ. 27 ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಳೆ ಮತ್ತು ಪ್ರವಾಹ ಮುಂಜಾಗ್ರತೆ ಕುರಿತು ಕರೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಿದ್ದರು. ತಾಲೂಕಿನ 8 ಗ್ರಾಮಗಳನ್ನು ಸೂಕ್ಷ್ಮವೆಂದು ಗುರಿತಿಸಲಾಗಿದ್ದು, ಪ್ರವಾಹ ಪರಿಸ್ಥಿತಿ ತಲೆದೂರಿದರೇ ಜನ-ಜಾನುವಾರಗಳ ಸ್ಥಳಾಂತರ, ಮೇವು, ಕುಡಿಯುವ ನೀರು ಮತ್ತು ಕಾಳಜಿ ಕೇಂದ್ರ ತೆರೆಯಲಾಗುವುದು. ತಾಲೂಕಿನಲ್ಲಿ ಒಟ್ಟು 8 ಬೋಟ್ಗಳು ಇದ್ದು, ಅವುಗಳನ್ನು ಸುಸ್ಥಿತಯಲ್ಲಿ ಇಡಲಾಗಿದೆ. ಅಗತ್ಯ ಬಿದ್ದಲ್ಲಿ ಎನ್ಡಿಎಫ್ಆರ್ ತಂಡಗಳು ಕಾರ್ಯ ನಿರ್ವಹಿಸಲಿದೆ. ಯಾವುದೇ ಕಾರಣಕ್ಕೂ ಅಧಿಕಾರಿಗಳು ನಿರ್ಲಕ್ಯ ತೋರಬಾರದು. ಮತ್ತು ಸ್ಥಳದಲ್ಲಿಯೇ ಇದ್ದು, ಸಾರ್ವಜನಿಕರಿಗೆ ಎಲ್ಲ ರೀತಿಯ ಸಹಕಾರ ನೀಡಬೇಕೆಂದು ಸೂಚಿಸಿದರು.
ಇನ್ನೂ ನದಿ ತೀರದ ಗ್ರಾಮಗಳ ಜನರು ಎಚ್ಚರಿಕೆ ವಹಿಸಬೇಕು. ನದಿ ದಡಕ್ಕೆ ತಮ್ಮ ಜಾನುವಾರಗಳನ್ನು ತೊಳೆಯಲು ಮತ್ತು ಬಟ್ಟೆ ತೊಳೆಯಲು ಹೋಗಬಾರದು. ಪ್ರವಾಹ ನಿರ್ವಹನೆಗಾಗಿ ನೇಮಕಗೊಂಡಿರುವ ಅಧಿಕಾರಿಗಳಿಗೆ ಸಹಕಾರ ನೀಡಬೇಕೆಂದು ಸೂಚಿಸಿದರು.
ಇನ್ನೂ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಈ ಸಮಯದಲ್ಲಿ ತಹಶೀಲ್ದಾರ ರಾಜೇಶ ಬುರ್ಲಿ, ಬಿಇಓ ಎಂ.ಆರ್. ಮುಂಜೆ, ಸಿಡಿಪಿಓ ಸಂಜೀವಕುಮಾರ ಸದಲಗಿ, ಪಿಡಬ್ಲ್ಯೂಡಿಯ ಜಯಾನಂದ ಹಿರೇಮಠ, ಬಸವರಾಜ ಮಗದುಮ್ಮ, ಆರ್ಎಪ್ಓ ರಾಕೇಶ ಅರ್ಜನವಾಡ, ಮಲ್ಲಿಕಾರ್ಜುನ ನಾಮದಾರ, ಪ್ರಶಾಂತ ಪೋತದಾರ, ಮಹಾಂತೇಶ ಕೌವಲಾಪೂರ, ಕೆ.ಕೆ. ಗಾವಡೆ, ಎ.ಡಿ. ಅನ್ಸಾರಿ, ಸೇರಿದಂತೆ ಇಲಾಖೆಯ ಅಧಿಕಾರಿಗಳು, ಪ.ಪಂ.ನ ಮುಖ್ಯಾಧಿಕಾರಿಗಳು, ಎಲ್ಲ ಗ್ರಾಮಗಳ ಪಿಡಿಒಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 