ಕರಡು ಅಭಿವೃದ್ಧಿ ಯೋಜನೆ ಶಿಸ್ತುಭದ್ಧವಾಗಿ ಸಿದ್ಧಪಡಿಸಿ: ಶಾಸಕ ನಾಡಗೌಡ
Prepare the draft development plan in a disciplined manner: MLA Nadagowda
ತಾಳಿಕೋಟಿ 27: ಮುದ್ದೇಬಿಹಾಳ ಎರಡೂ ತಾಲೂಕಿನ ಎಲ್ಲ ಇಲಾಖೆಗಳ ಸಂಯೋಜನೆಯೊಂದಿಗೆ ತಾಲೂಕ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯನ್ನು ಶಿಸ್ತು ಬದ್ಧವಾಗಿ ಸಿದ್ಧಪಡಿಸಲು ಕೆ ಎಸ್ ಡಿ ಎಲ್ ಅಧ್ಯಕ್ಷ, ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಹೇಳಿದರು.
ಮಂಗಳವಾರ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ 2026-27ನೇ ಸಾಲಿನ ವಾರ್ಷಿಕ ಕರಡು ಅಭಿವೃದ್ಧಿ ಕ್ರಿಯಾ ಯೋಜನೆ ಸಿದ್ಧಪಡಿಸಲು ಕರೆದ ತಾಲೂಕ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಎಲ್ಲಾ ಇಲಾಖೆಗಳು ಸಲ್ಲಿಸಿದ ಬೇಡಿಕೆಗಳನ್ನು ಪರೀಶೀಲಿಸಿದ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು ಇನ್ನು ಅಗತ್ಯವಿರುವ ಕಾಮಗಾರಿಗಳ ಬೇಡಿಕೆಯನ್ನು ಸಲ್ಲಿಸಲು ತಿಳಿಸಿದರು.
ಇವುಗಳಲ್ಲಿ ಪ್ರಮುಖವಾಗಿ ಕುಡಿಯುವ ನೀರು ಮತ್ತು ಗ್ರಾಮೀಣ ನೈರ್ಮಲ್ಯ ಇಲಾಖೆ, ಮಹಿಳಾ ಮತ್ತು ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪ್ರಾದೇಶಿಕ ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಇವುಗಳ ಸಯೋಜನೆಯೊಂದಿಗೆ ಶಿಸ್ತುಬದ್ಧವಾಗಿ ಕರಡು ಯೋಜನೆಯನ್ನು ಸಿದ್ಧಪಡಿಸಲು ತಿಳಿಸಿದರು.
ಸಭೆಯಲ್ಲಿ ತಹಸಿಲ್ದಾರ್ ಡಾ.ವಿನಯಾ ಹೂಗಾರ, ತಾಪಂ ಇಓ ಅನಸೂಯಾ ಚಲವಾದಿ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಬಿ ಎಂ ಸಾಗರ, ತಾಲೂಕ ಯೋಜನಾಧಿಕಾರಿ ಖುಬಸಿಂಗ್ ಜಾಧವ, ಸಹಾಯಕ ನಿರ್ದೇಶಕ (ಗ್ರಾ.ಉ.) ಎಸ್.ಎಸ್. ಗಣಾಚಾರ್ಯ, ವಿವಿಧ ಇಲಾಖೆಗಳ ತಾಲೂಕ ಮಟ್ಟದ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಪಂ ಸಿಬ್ಬಂದಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 