ರಾಜ್ಯಪಾಲರುಗಳ ಜೊತೆ ರಾಷ್ಟ್ರಪತಿ, ಉಪರಾಷ್ಟಪತಿ ವಿಡಿಯೋ ಕಾನ್ಫರೆನ್ಸ್
ನವದೆಹಲಿ, ಏ ೩, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಶುಕ್ರವಾರ ಹಲವು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು, ಉಪ ರಾಜ್ಯಪಾಲರುಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ದೇಶಾದ್ಯಂತ ಸೃಷ್ಟಿಯಾಗಿರುವ ಕೋವಿಡ್ -೧೯ ಸೋಂಕು ಪರಿಸ್ಥಿತಿಯನ್ನು ಸಮೀಕ್ಷಿಸಿದರು. ಈ ಕಾರ್ಯಕ್ರಮದಲ್ಲಿ ಆಯಾ ರಾಜ್ಯಗಳ ಉನ್ನತ ಅಧಿಕಾರಿಗಳು ಕೂಡಾ ಪಾಲ್ಗೊಂಡಿದ್ದರು.ರಾಷ್ಟ್ರಪತಿ, ಉಪ ರಾಷ್ಟ್ರಪತಿ ಒಂದು ವಾರದಲ್ಲಿ ಎರಡನೇ ಬಾರಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯಪಾಲರುಗಳೊಂದಿಗೆ ಸಂವಾದ ನಡೆಸಿದ್ದರು.
ಮಾರ್ಚ್ ೨೭ ರಂದು ೧೪ ರಾಜ್ಯಗಳ ರಾಜ್ಯಪಾಲರೊಂದಿಗೆ ಮೊದಲ ವಿಡಿಯೋ ಸಮ್ಮೇಳನ ನಡೆಸಿದ್ದರು. ಅದರಲ್ಲಿ ಕೇಂದ್ರಾಡಳಿ ಪ್ರದೇಶಗಳ ಉಪ ರಾಜ್ಯಪಾಲರು ಭಾಗಿಯಾಗಿದ್ದರು. ಉಳಿದ ರಾಜ್ಯಪಾಲರು, ಉಪ ರಾಜ್ಯಪಾಲರೊಂದಿಗೆ ರಾಷ್ಟ್ರಪತಿ ಇಂದು ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಆಯಾ ರಾಜ್ಯಗಳಲ್ಲಿನ ಕೋವಿಡ್ -೧೯ ಪರಿಸ್ಥಿತಿಯ ಬಗ್ಗೆ ಈ ಸಂದರ್ಭದಲ್ಲಿ ಪ್ರಮುಖವಾಗಿ ಚರ್ಚೆ ನಡೆಸಿದರು. ಕೊರೊನಾ ವೈರಸ್ ಹಬ್ಬುವುದನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರವಲ್ಲದೆ, ರೆಡ್ ಕ್ರಾಸ್ ಸೊಸೈಟಿ, ನಾಗರಿಕ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಖಾಸಗಿ ವಲಯ ವಹಿಸಬೇಕಾದ ಪಾತ್ರದ ಬಗ್ಗೆ ರಾಷ್ಟ್ರಪತಿ ಚರ್ಚಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 