ಆಶ್ರಯ ಬಡಾವಣೆ ನಿವಾಸಿಗಳಿಂದ ಅಧ್ಯಕ್ಷ ಕೆಂಭಾವಿಗೆ ಸನ್ಮಾನ
President Kembhavi honored by residents of Ashraya Barangay
ತಾಳಿಕೋಟಿ: ಪಟ್ಟಣದ ದಿ.ಮುಸ್ಲೀಮ್ ಕೋ-ಆಪರೇಟಿವ್ ಬ್ಯಾಂಕ್ ಇದರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮಹೆಬೂಬ ಹಜರೇಸಾಬ ಕೆಂಭಾವಿ ಇವರನ್ನು ಆಶ್ರಯ ಬಡಾವಣೆಯ ನಿವಾಸಿಗಳು ಶುಕ್ರವಾರ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬಡಾವಣೆಯ ನಿವಾಸಿ ಅಬ್ದುಲ್ ಪಟ್ಟೇವಾಲೆ ಅವರು ಮಾತನಾಡಿ ಮೆಹಬೂಬ ಕೆಂಭಾವಿ ಅವರು ಮುಸ್ಲಿಂ ಬ್ಯಾಂಕ್ ಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ನಮಗೆಲ್ಲರಿಗೂ ಸಂತೋಷವನ್ನುಂಟು ಮಾಡಿದೆ ಏಕೆಂದರೆ ಅವರು ನಮ್ಮ ಬಡಾವಣೆಯಲ್ಲಿ ನಡೆಯುವ ಹಲವಾರು ಕಾರ್ಯಕ್ರಮಗಳಲ್ಲಿ ಸಹಾಯ ಸಹಕಾರ ನೀಡುತ್ತಲೇ ಬಂದಿದ್ದಾರೆ,
ಮುಂದೆಯೂ ಅವರ ಸಹಕಾರ ನಮ್ಮೊಂದಿಗೆ ಇರಲಿ. ಬಡಾವಣೆಯ ಪರವಾಗಿ ನಾನು ಅವರಿಗೆ ಅಭಿನಂದಿಸುತ್ತೇನೆ ಎಂದರು. ಸನ್ಮಾನ ಸ್ವೀಕರಿಸಿ ಅಧ್ಯಕ್ಷ ಮಹೆಬೂಬ ಕೆಂಭಾವಿ ಮಾತನಾಡಿ ನಿಮ್ಮೆಲ್ಲರ ಪ್ರೀತಿ ಹಾಗೂ ನಿರ್ದೇಶಕರ ಸಹಕಾರದಿಂದ ನಾನು ಅವಿರೋಧವಾಗಿ ಆಯ್ಕೆಯಾಗಿದ್ದೇನೆ, ಬ್ಯಾಂಕಿನಿಂದ ನಿಮಗೆ ಸಿಗುವ ಸೌಲಭ್ಯ ಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.ಇದರ ಜೊತೆಗೆ ನಿಮ್ಮ ಬಡಾವಣೆಗಾಗಿ ನನ್ನಿಂದ ಸಾಧ್ಯವಾದಷ್ಟು ಸಹಾಯ-ಸಹಕಾರ ಮಾಡುತ್ತೇನೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ರಫೀಕ ಬೇಪಾರಿ ಅವರನ್ನೂ ಸನ್ಮಾನಿಸಲಾಯಿತು.ಈ ಸಮಯದಲ್ಲಿ ನಿರ್ದೇಶಕರಾದ ತನ್ವೀರ ಮನಗೂಳಿ, ಮುನ್ನಾ ಅರ್ಜುಣಗಿ, ಬಡಾವಣೆಯ ಪ್ರಮುಖರಾದ ದಾಬಲಸಾಬ ಡೋಣಿ, ಖಾಸೀಮಸಾಬ ಮುಲ್ಲಾ, ಉಸ್ಮಾನ ಲಾಹೋರಿ,ರಾಜು ಚಿತ್ತರಗಿ, ಎಸ್ಡಿಎಂಸಿ ಅಧ್ಯಕ್ಷ ದಸ್ತಗೀರಸಾಬ ಎಕೀನ,ದಾವಲಸಾಬ ರಂಜಣಗಿ,ನಬಿಸಾಬ ಪಠಾಣ,ಮೌಲಾಸಾಬ ಬಳಗಾನೂರ, ಕಾಜು ಮಕಾಂದಾರ, ಅಬ್ದುಲ್ ರಜಾಕ ಪಟ್ಟೇವಾಲೆ, ಇಬ್ರಾಹಿಂ ಶಾಪೂರಿ,ರಫೀಕ ಚೋರಗಸ್ತಿ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 