ಪತ್ರಿಕಾ ದಿನಾಚರಣೆ: ಜವಾಬ್ದಾರಿಯುತ ಪತ್ರಿಕೋದ್ಯಮದ ಮಹತ್ವಕ್ಕೆ ಒತ್ತು
Press Day: Emphasis on the importance of responsible journalism
ಕಂಪ್ಲಿ 24: ಪಟ್ಟಣದ ಶ್ರೀ ವಿದ್ಯಾಸಾಗರ ಇಂಟರ್ನ್ಯಾಷನಲ್ ಸ್ಕೂಲ್ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕವು ಶುಕ್ರವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಸಮಾರಂಭ ನಡೆಯಿತು. ತಹಸೀಲ್ದಾರ್ ಜೂಗಲ ಮಂಜುನಾಯಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವಾತಂತ್ರ್ಯಗಳಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ. ಸ್ವಾತಂತ್ರ್ಯ ಮತ್ತು ಸ್ವಾತಂತ್ರ್ಯ ನಂತರದ ಪತ್ರಿಕೆಗಳ ಸ್ವರೂಪ ಬದಲಾಗಿದೆ. ಪತ್ರಿಕೆ ಕೇವಲ ಮಾಹಿತಿಕೊಡುವ ಮಾಧ್ಯಮ ಆಗಿಲ್ಲ. ಸ್ವಾತಂತ್ರ್ಯಕ್ಕಾಗಿ ಹೋರಾಟದ ಕಿಚ್ಚನ್ನು ಪ್ರೇರೇಪಿಸಿ ದೇಶವಾಸಿಗಳನ್ನು ಒಟ್ಟುಗೂಡಿಸಲು ಪತ್ರಿಕೆ ಮಹತ್ವದ ಪಾತ್ರವಹಿಸಿತ್ತು. ಪತ್ರಿಕೆ ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾಗಿದ್ದು. ಸಾಮಾನ್ಯ ಜನರ ಪ್ರತಿಧ್ವನಿಯಾಗಿದೆ. ಕಂಪ್ಲಿ ಪಟ್ಟಣದ ಪತ್ರಕರ್ತರು ನಿಖರ ಮಾಹಿತಿ ಕೊಡುವಲ್ಲಿ ಮುಂಚೂಣಿಯಲ್ಲಿದ್ದಾರೆ.
ಸುದ್ದಿ ಪ್ರಕಟಿಸುವ ಮೊದಲು ಸೂಕ್ತವಾಗಿ ಪರೀಶೀಲಿಸಿ ಪ್ರಕಟಿಸಲು ಪತ್ರಕರ್ತರು ಮುಂದಾಗಬೇಕು. ಪ್ರಚಲಿತ ವಿದ್ಯಮಾನ, ಜ್ಞಾನ ವೃದ್ಧಿಗೆ ಪತ್ರಿಕೆ ಸಹಕಾರಿಯಾಗಿವೆ. ಪತ್ರಿಕೆ ಮಾಹಿತಿ ನೀಡುವ ಪೇಪರ್ ಅಲ್ಲ ಸಮಾಜದ ಧ್ವನಿಯಾಗಿದೆ ಎಂದು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಎನ್.ವೀರಭದ್ರಗೌಡ ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಪತ್ರಿಕೋಧ್ಯಮದ ಬೆಳವಣಿಗೆ ಮಂಗಳೂರು ಸಮಾಚಾರದಿಂದ ಬಳ್ಳಾರಿಯಿಂದಲೇ ಶುರುವಾಯಿತು. ಸೋಶಿಯಲ್ ಮೀಡಿಯಾದಲ್ಲಿನ ಎಲ್ಲ ಸುದ್ದಿಗಳು ನಿಜವಲ್ಲ. ಪತ್ರಿಕೆಗಳು ನಿಖರ ಸುದ್ದಿ ಕೊಡುವಲ್ಲಿ ಮುಂದಾಗಿವೆ. ಸುದ್ದಿ ಖಚಿತಪಡಿಸಿಕೊಂಡ ಮೇಲೆ ಪ್ರಕಟಿಸಲು ವರದಿ ನೀಡಬೇಕು. ಸರಿಯಾದ ಸುದ್ದಿ, ಮಾಹಿತಿ ಪತ್ರಿಕೆಗಳಿಗೆ ನೀಡುವುದು ಪತ್ರಕರ್ತರ ಹೊಣೆಯಾಗಿದೆ.
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ 