ಡೆಂಗ್ಯೂ ಮತ್ತು ಮಲೇರಿಯಾ ಸಾಂಕ್ರಾಮಿಕ ರೋಗಗಳಿಗೆ ಮುಂಜಾಗ್ರತಾ ಕ್ರಮವಹಿಸಬೇಕು: ಪಾಟೀಲ
Preventive measures should be taken against dengue and malaria epidemics: Patil
ಧಾರವಾಡ 16: ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗಿರುವ ಕಾರಣ ಗ್ರಾಮದಲ್ಲಿ ಡೆಂಗ್ಯೂ ಮತ್ತು ಮಲೇರಿಯಾ ಸಾಂಕ್ರಾಮಿಕ ರೋಗಗಳಿಗೆ ಮುಂಜಾಗ್ರತಾ ಕ್ರಮವಹಿಸಬೇಕೆಂದು ಧಾರವಾಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ವಿವಿಧ ಕಾರ್ಯಕ್ರಮಗಳ ಕುರಿತು ಪ್ರಗತಿ ಪರೀಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಆರೋಗ್ಯದ ವಿಚಾರವಾಗಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಹೆಚ್ಚಿನ ಕಾಳಜಿ ವಹಿಸಿ ಕಾರ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆಯಿಂದ ನಡೆಸಲಾಗುವ ವಿವಿಧ ಐ ಇ ಸಿ ಜಾಗೃತಿ ಕಾರ್ಯಕ್ರಮಗಳು ಹಾಗೂ ಸರ್ಕಾರ ಯೋಜನೆಗಳನ್ನು ಅನುಷ್ಠಾನಗೊಳಿಸಿ ಸರ್ಕಾರದ ಸೌಲಭ್ಯಗಳು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ತಿಳಿಸಿದರು.ಗ್ರಾಮೀಣ ಮಟ್ಟದಿಂದ ಜಿಲ್ಲಾಮಟ್ಟದವರೆಗಿನ ಎಲ್ಲಾ ಆರೋಗ್ಯ ಕೇಂದ್ರಗಳು ಹಾಗೂ ಆಸ್ಪತ್ರೆಗಳಲ್ಲಿ ಸರಿಯಾದ ಸಮಯದಲ್ಲಿ ಹಾಜರಿದ್ದು, ರೋಗಿಯ ಆರೈಕೆ ಜೊತೆಗೆ ಆಡಳಿತ ವಿಚಾರದಲ್ಲಿಯೂ ಹೆಚ್ಚಿನ ಒತ್ತು ನೀಡುವಂತೆ ಸೂಚನೆ ನೀಡಿದರು.ಜಿಲ್ಲೆಯಲ್ಲಿರುವ ಎಲ್ಲಾ ಉಪ ಕೇಂದ್ರಗಳು,ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳು ಕಾಯಕಲ್ಪ ಯೋಜನೆ ಅಡಿಯಲ್ಲಿ ಸೂಚಿಸಿದಂತಹ ಮಾನದಂಡಗಳ ಪ್ರಕಾರ ಅರ್ಹತೆ ಪಡೆದುಕೊಳ್ಳಬೇಕು ಎಂದರು. ಈ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೊನಿಕೆರೆ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರ, ಜಿಲ್ಲಾ ಪಂಚಾಯತ್ ಸಿಬ್ಬಂದಿ ಉಪಸ್ಥಿತಿದರು.ಡಿಜರಚಿಡಿ,ಆಜಠಿಣಣಥಿ ಖಜಛಿಡಿಜಣಚಿಡಿಥಿ,ಚಟಟಚಿ ಕಚಿಟಿಛಿಚಿಥಿಚಿಣ,ಆಚಿಡಿತಿಚಿಜ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 