ಪ್ರಾಥಮಿಕ ಶಾಲೆಯ ವಾಷರ್ಿಕ ಸ್ನೇಹ ಸಮ್ಮೇಳನ
ಲೋಕದರ್ಶನ ವರದಿ
ಬೈಲಹೊಂಗಲ 6: ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ಕೊಡಿಸುವುದರೊಂದಿಗೆ ಅವರು ಸಾಮಾಜಿಕ ಭದ್ರತೆಯಿಂದ ಮತ್ತು ಸ್ವಾವಲಂಬಿತನದಿಂದ ಬಾಳುವಂತೆ ಸಶಕ್ತರಾಗಿಸುವ ಹೊಣೆ ಪಾಲಕರ ಹಾಗೂ ಶಿಕ್ಷಕರ ಗುರುತರ ಜವಾಬ್ದಾರಿಯಾಗಿದೆ ಎಂದು ಕಿಲ್ಲಾ ತೋರಗಲ್ಲದ ಚನ್ನಮಲ್ಲಶಿವಾಚಾರ್ಯ ಸ್ವಾಮಿಜಿ ಹೇಳಿದರು.
ಅವರು ಸಮೀಪದ ಯಕ್ಕುಂಡಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಾಷರ್ಿಕ ಸ್ನೇಹ ಸಮ್ಮೇಳನ ಹಾಗೂ ಶ್ರೀ ಗುರು ಮುರುಘೇಂದ್ರ ಅನಾಥಮಕ್ಕಳ ನಿಲಯದ ವಾಷರ್ಿಕೋತ್ಸವ ಮತ್ತು 7 ನೇ ತರಗತಿಯ ವಿದ್ಯಾಥರ್ಿಗಳ ಬಿಳ್ಕೋಡುವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಹಾಗೂ ಯಕ್ಕುಂಡಿಯ ಕುಮಾರೇಶ್ವರ ವಿರಕ್ತಮಠದ ಪೀಠಾಧ್ಯಕ್ಷರಾದ ಪಂಚಾಕ್ಷರ ಮಹಾಸ್ವಾಮಿಜಿ ಸಾನಿಧ್ಯ ವಹಿಸಿದ್ದರು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಬಸವರಾಜ ಹೊಂಗಲ, ಶಂಕರಗೌಡ ಪಾಟೀಲ, ಅಬ್ದುಲ್ ಖಾದರ ಜೈಲಾನಿ ಬಾರಿಗಿಡದ, ಬಡ್ಲಿ ಗ್ರಾ ಪಂ ಅಧ್ಯಕ್ಷ ಅಶೋಕ ಖನಗಾಂವಿ, ತಾ ಪಂ ಉಪಾಧ್ಯಕ್ಷೆ ಸೋನವ್ವ ದೊಡಮನಿ, ಪ್ರಾಚಾರ್ಯರಾದ ಎ. ಬಿ. ಮಿರಜಕರ, ರಾಕೇಶ ದೇಸಾಯಿ,ದುಂಡಯ್ಯಾ ಹಿರೇಮಠ, ಸಿ. ಆರ್. ಪಿ. ಎಸ್. ಎಸ್. ಮಲ್ಲನ್ನವರ, ಮುಖ್ಯೋಪಾಧ್ಯಾಯ ಆಯ್. ಎಸ್. ಚಿಕ್ಕನಗೌಡರ ಇದ್ದರು.
ರಮೇಶ ಹೊಸಮನಿ ವರದಿ ಮಂಡಿಸಿದರು. ಎಮ್. ಎಸ್. ವಿಭೂತಿ ನಿರೂಪಿಸಿದರು. ಆರ್. ಆರ್. ಅಂಗಡಿ ಸ್ವಾಗತಿಸಿದರು. ಸಿ. ಖ. ಮಾಳಗಿ ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 