ಪ್ರಾಥಮಿಕ ಶಾಲೆಯ ವಾಷರ್ಿಕ ಸ್ನೇಹ ಸಮ್ಮೇಳನ
ಲೋಕದರ್ಶನ ವರದಿ
ಬೈಲಹೊಂಗಲ 6: ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ಕೊಡಿಸುವುದರೊಂದಿಗೆ ಅವರು ಸಾಮಾಜಿಕ ಭದ್ರತೆಯಿಂದ ಮತ್ತು ಸ್ವಾವಲಂಬಿತನದಿಂದ ಬಾಳುವಂತೆ ಸಶಕ್ತರಾಗಿಸುವ ಹೊಣೆ ಪಾಲಕರ ಹಾಗೂ ಶಿಕ್ಷಕರ ಗುರುತರ ಜವಾಬ್ದಾರಿಯಾಗಿದೆ ಎಂದು ಕಿಲ್ಲಾ ತೋರಗಲ್ಲದ ಚನ್ನಮಲ್ಲಶಿವಾಚಾರ್ಯ ಸ್ವಾಮಿಜಿ ಹೇಳಿದರು.
ಅವರು ಸಮೀಪದ ಯಕ್ಕುಂಡಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಾಷರ್ಿಕ ಸ್ನೇಹ ಸಮ್ಮೇಳನ ಹಾಗೂ ಶ್ರೀ ಗುರು ಮುರುಘೇಂದ್ರ ಅನಾಥಮಕ್ಕಳ ನಿಲಯದ ವಾಷರ್ಿಕೋತ್ಸವ ಮತ್ತು 7 ನೇ ತರಗತಿಯ ವಿದ್ಯಾಥರ್ಿಗಳ ಬಿಳ್ಕೋಡುವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಹಾಗೂ ಯಕ್ಕುಂಡಿಯ ಕುಮಾರೇಶ್ವರ ವಿರಕ್ತಮಠದ ಪೀಠಾಧ್ಯಕ್ಷರಾದ ಪಂಚಾಕ್ಷರ ಮಹಾಸ್ವಾಮಿಜಿ ಸಾನಿಧ್ಯ ವಹಿಸಿದ್ದರು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಬಸವರಾಜ ಹೊಂಗಲ, ಶಂಕರಗೌಡ ಪಾಟೀಲ, ಅಬ್ದುಲ್ ಖಾದರ ಜೈಲಾನಿ ಬಾರಿಗಿಡದ, ಬಡ್ಲಿ ಗ್ರಾ ಪಂ ಅಧ್ಯಕ್ಷ ಅಶೋಕ ಖನಗಾಂವಿ, ತಾ ಪಂ ಉಪಾಧ್ಯಕ್ಷೆ ಸೋನವ್ವ ದೊಡಮನಿ, ಪ್ರಾಚಾರ್ಯರಾದ ಎ. ಬಿ. ಮಿರಜಕರ, ರಾಕೇಶ ದೇಸಾಯಿ,ದುಂಡಯ್ಯಾ ಹಿರೇಮಠ, ಸಿ. ಆರ್. ಪಿ. ಎಸ್. ಎಸ್. ಮಲ್ಲನ್ನವರ, ಮುಖ್ಯೋಪಾಧ್ಯಾಯ ಆಯ್. ಎಸ್. ಚಿಕ್ಕನಗೌಡರ ಇದ್ದರು.
ರಮೇಶ ಹೊಸಮನಿ ವರದಿ ಮಂಡಿಸಿದರು. ಎಮ್. ಎಸ್. ವಿಭೂತಿ ನಿರೂಪಿಸಿದರು. ಆರ್. ಆರ್. ಅಂಗಡಿ ಸ್ವಾಗತಿಸಿದರು. ಸಿ. ಖ. ಮಾಳಗಿ ವಂದಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 