ಇಂದು 'ಮನೋರಮಾ ನ್ಯೂಸ್ ಕನ್ಕ್ಲೇವ್' ಉದ್ದೇಶಿಸಿ ಪ್ರಧಾನಿ ಭಾಷಣ
ನವದೆಹಲಿ, ಆ 30 ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ "ಮನೋರಮಾ ನ್ಯೂಸ್ ಕನ್ಕ್ಲೇವ್-2019" ಅನ್ನು ಉದ್ದೇಶಿಸಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಕೊಚ್ಚಿಯಲ್ಲಿ ನಡೆಯುವ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಈ ಸಮಾವೇಶವನ್ನು ಮಲಯಾಳ ಮನೋರಮಾ ಕಂಪನಿ ಲಿಮಿಟೆಡ್ ಆಯೋಜಿಸಿದೆ. 2019ರ ಆವೃತ್ತಿಯು ಕೇರಳದ ಮೊದಲ ಮತ್ತು ಏಕೈಕ ಸುದ್ದಿ ಸಮಾವೇಶವಾಗಿದ್ದು, 'ನವ ಭಾರತ, ನವ ಸರ್ಕಾರ, ಹೊಸ ಆಕಾಂಕ್ಷೆಗಳು; ಹೊಸ ಸವಾಲುಗಳು; ಹೊಸ ಗಡಿಗಳು ಮತ್ತು ಹೊಸ ಮಾರ್ಗಗಳು' ಕುರಿತ ಅತ್ಯಂತ ಸಮಕಾಲೀನ ಧ್ಯೇಯವನ್ನು ಹೊಂದಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ನವ ಭಾರತ ಕುರಿತ ತಮ್ಮ ದೃಷ್ಟಿಕೋನವನ್ನು ಪ್ರಸ್ತುತಪಡಿಸುತ್ತಾರೆ. ಸಮಾವೇಶದಲ್ಲಿ ಬಿಜೆಪಿ ಮುಖಂಡ ಆರ್.ಬಾಲಶಂಕರ್, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರರಾವ್, ಸಿಪಿಐ ಮುಖಂಡ ಡಿ ರಾಜಾ, ತಿರುವನಂತಪುರಂ ಲೋಕಸಭಾ ಕ್ಷೇತ್ರದ ಸಂಸದ ಡಾ.ಶಶಿ ತರೂರ್, ಬಿಜೆಪಿ ರಾಷ್ಟ್ರೀಯ ವಕ್ತಾರರಾದ ಮೀನಾಕ್ಷಿ ಲೇಖಿ ಮತ್ತು ಇತರರು ಮಾತನಾಡಲಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 