ಇಂದು 'ಮನೋರಮಾ ನ್ಯೂಸ್ ಕನ್ಕ್ಲೇವ್' ಉದ್ದೇಶಿಸಿ ಪ್ರಧಾನಿ ಭಾಷಣ
ನವದೆಹಲಿ, ಆ 30 ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ "ಮನೋರಮಾ ನ್ಯೂಸ್ ಕನ್ಕ್ಲೇವ್-2019" ಅನ್ನು ಉದ್ದೇಶಿಸಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಕೊಚ್ಚಿಯಲ್ಲಿ ನಡೆಯುವ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಈ ಸಮಾವೇಶವನ್ನು ಮಲಯಾಳ ಮನೋರಮಾ ಕಂಪನಿ ಲಿಮಿಟೆಡ್ ಆಯೋಜಿಸಿದೆ. 2019ರ ಆವೃತ್ತಿಯು ಕೇರಳದ ಮೊದಲ ಮತ್ತು ಏಕೈಕ ಸುದ್ದಿ ಸಮಾವೇಶವಾಗಿದ್ದು, 'ನವ ಭಾರತ, ನವ ಸರ್ಕಾರ, ಹೊಸ ಆಕಾಂಕ್ಷೆಗಳು; ಹೊಸ ಸವಾಲುಗಳು; ಹೊಸ ಗಡಿಗಳು ಮತ್ತು ಹೊಸ ಮಾರ್ಗಗಳು' ಕುರಿತ ಅತ್ಯಂತ ಸಮಕಾಲೀನ ಧ್ಯೇಯವನ್ನು ಹೊಂದಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ನವ ಭಾರತ ಕುರಿತ ತಮ್ಮ ದೃಷ್ಟಿಕೋನವನ್ನು ಪ್ರಸ್ತುತಪಡಿಸುತ್ತಾರೆ. ಸಮಾವೇಶದಲ್ಲಿ ಬಿಜೆಪಿ ಮುಖಂಡ ಆರ್.ಬಾಲಶಂಕರ್, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರರಾವ್, ಸಿಪಿಐ ಮುಖಂಡ ಡಿ ರಾಜಾ, ತಿರುವನಂತಪುರಂ ಲೋಕಸಭಾ ಕ್ಷೇತ್ರದ ಸಂಸದ ಡಾ.ಶಶಿ ತರೂರ್, ಬಿಜೆಪಿ ರಾಷ್ಟ್ರೀಯ ವಕ್ತಾರರಾದ ಮೀನಾಕ್ಷಿ ಲೇಖಿ ಮತ್ತು ಇತರರು ಮಾತನಾಡಲಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 