ವಿಜ್ಞಾನ ಕಲಿಕೆಗೆ ಆದ್ಯತೆ ನೀಡಿ- ಎಸ್ ಎಸ್ ಪಾಟೀಲ್
Prioritize learning science - SS Patil
ವಿಜ್ಞಾನ ಕಲಿಕೆಗೆ ಆದ್ಯತೆ ನೀಡಿ- ಎಸ್ ಎಸ್ ಪಾಟೀಲ್
ಹೂವಿನ ಹಡಗಲಿ 14: ಮೂಲಭೂತ ವಿಜ್ಞಾನ ಕಲಿಕೆಗೆ ಆದ್ಯತೆ ನೀಡಿರಿ ಎಂದು ಪ್ರಾಚಾರ್ಯರಾದ ಪ್ರೊ ಎಸ್ ಎಸ್ ಪಾಟೀಲ್ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ಜಿ ಬಿ ಆರ್ ಕಾಲೇಜಿನ ಹಾನಗಲ್ಲ ಕುಮಾರೇಶ ಸಭಾಂಗಣದಲ್ಲಿ ಮಂಗಳವಾರ ಪ್ರಥಮ ಬಿ ಎಸ್ ಸಿ ಹಾಗೂ ಬಿ ಸಿ ಎ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಪರಿಚಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದ ಓದಿಗೆ ಸೀಮಿತರಾಗದೆ ಹೊಸ ವಿಜ್ಞಾನದ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಿರಿ ಎಂದು ಹೇಳಿದರು.ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಮೋಹನ್ ರೆಡ್ಡಿ ಮಾತನಾಡಿದರು.ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಸುರೇಶ ಅಂಗಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿಜ್ಞಾನಿಗಳ ಸಂಶೋಧನೆ ಬದುಕು ಆದರ್ಶ ಆಗಬೇಕು. ಮೇಡಂ ಕ್ಯೂರಿ ಐಸಾಕ್ ನ್ಯೂಟನ್ ಆಲ್ಫ್ರಡ್ ನೊಬೆಲ್ ಸಿ ವಿ ರಾಮನ್ ಎಡಿಸನ್ ಶ್ರೇಷ್ಠ ವಿಜ್ಞಾನಿಗಳು ಜನ ಸಾಮಾನ್ಯರ ಒಳಿತಿಗಾಗಿ ಸಂಶೋಧನೆ ಮಾಡಿದ್ದಾರೆ ಎಂದು ತಿಳಿಸಿದರು .ಉಪನ್ಯಾಸಕ ಚಂದ್ರಬಾಬು, ಬಿ ಸಿ ಎ ವಿಭಾಗದ ಮಹಿಮಾ ಜ್ಯೋತಿ.ಅಕ್ಷತಾ ಮಾತನಾಡಿದರು. ಉಪನ್ಯಾಸಕರಾದ ಸಂದೀಪ್, ಹರ್ಷ ಕೆ ಎಂ, ಕುಸುಮ ಶ್ವೇತಾ ಮಹೇಶ್, ಚಂದನ, ಅಂದವ್ವ ಇತರರು ಇದ್ದರು.ಅನುಷಾ, ನಂದೀಶ್, ರೋಹಿತ್ ಕುಮಾರ್, ಅಕ್ಷತಾ ಕೆ ಎಸ್ ನಿರ್ವಹಿಸಿದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 