ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಥಮಾದ್ಯತೆ: ಸಿ.ಸಿ.ಪಾಟೀಲ
ಗದಗ 11: ಪಕ್ಷದ ರಾಜಕಾರಣ ಚುನಾವಣೆಗೆ ಮಾತ್ರ ಸೀಮಿತವಾಗಿದ್ದು ತದನಂತರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಪ್ರಥಮಾದ್ಯತೆ ನೀಡುವುದೇ ಪ್ರತಿಯೊಬ್ಬ ಜನಪ್ರತಿನಿಧಿಗಳ ಕರ್ತವ್ಯವಾಗಿದೆ ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಸಿ.ಸಿ.ಪಾಟೀಲ ಅವರು ನುಡಿದರು.
ಗದಗ ತಾಲೂಕಿನ ಲಿಂಗಧಾಳದಲ್ಲಿಂದು ಸರಕಾರಿ ಪ್ರೌಢಶಾಲೆಯಲ್ಲಿ ಸೈಕಲ್ ವಿತರಣೆ ಕಾರ್ಯಕ್ರಮದಲ್ಲಿ ಶಾಲೆಯ ಹಾಗೂ ಗ್ರಾಮಸ್ಥರ ಮನವಿಯನ್ನು ಸ್ವೀಕರಿಸಿ ಅವರು ಮಾತನಾಡಿದರು. ಜಿಲ್ಲಾ , ತಾಲೂಕಾ ಹಾಗೂ ಗ್ರಾ. ಪಂ . ಮಟ್ಟದಲ್ಲಿ ಪಕ್ಷಾತೀತವಾಗಿ ತಮ್ಮ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿಗಳನ್ನೇ ಗುರಿಯಾಗಿಟ್ಟುಕೊಂಡು ಕಾರ್ಯನಿರ್ವಹಿಸಬೇಕು. ಸಂವಿಧಾನ ವ್ಯಾಪ್ತಿಯಲ್ಲಿ ಚುನಾಯಿತ ಪ್ರತಿನಿಧಿಗಳು ಅಧ್ಯಕ್ಷರುಗಳು , ಕಾರ್ಯನಿರ್ವಹಿಸಬೇಕು. ಲಿಂಗಧಾಳ ಗ್ರಾಮದ ಕೆರೆ ಗ್ರಾಮಕ್ಕೆ ಪೂರ್ವಜರು ನೀಡಿದ ಬಹುದೊಡ್ಡ ಕೊಡುಗೆ. ಅದನ್ನೀಗ ಗಟಾರದ ನೀರು ಹರಿಸುತ್ತಿರುವುದು ಖೇದಕರ ವಿಷಯ. ಲಿಂಗಧಾಳ ಗ್ರಾ. ಪಂಚಾಯತಿಯ ಕೆರೆ ಪುನಶ್ಚೇತನಕ್ಕೆ ಸಂಬಂಧಿಸದಿಂತೆ ಮೊದಲೇ ಕ್ರಿಯಾ ಯೋಜನೆ ರೂಪಿಸಿದ್ದಲ್ಲಿ ಒಳ್ಳೆಯದಾಗುತ್ತಿತ್ತು. ಪ್ರಸಕ್ತ ಕೆರೆಯ ಪುನಶ್ಚೇತನಕ್ಕಾಗಿ ಗ್ರಾ. ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆಯಡಿ ಸೂಕ್ತ ಕಾಮಗಾರಿಯನ್ನು ಸಂಯೋಜಿಸಬೇಕು. ಹಾಗೂ ಗಟಾರದ ನಿಮರ್ಾಣಕ್ಕೆ ಸಕರ್ಾರದಿಂದ 50 ಲಕ್ಷ ರೂ. ಬಿಡುಗಡೆ ಮಾಡುವಂತೆ ತಾವು ಕ್ರಮ ವಹಿಸುವುದಾಗಿ ತಿಳಿಸಿದ ಸಚಿವರು ಪ್ರಾಥಮಿಕ ಶಾಲಾ ಕೊಠಡಿಗಳ ದುರಸ್ತಿಗೆ 5 ಲಕ್ಷ ರೂ. ಬಿಡುಗಡೆ ಮಾಡಿಸುವುದಾಗಿ ಗಿ ಭರವಸೆ ನೀಡಿದರು. ಕೆರೆಯ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಲಿಂಗಧಾಳ ಗ್ರಾ. ಪಂ. ಅಗತ್ಯದ ಕ್ರಮ ಜರುಗಿಸಿ ಕ್ರಿಯಾ ಯೋಜನೆಯನ್ನು ಸಲ್ಲಿಸಲು ಪಿ.ಡಿ.ಓಗಳಿಗೆ ಸಚಿವ ಸಿ.ಸಿ.ಪಾಟೀಲ ಸೂಚನೆ ನೀಡಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 