ಪಟ್ಟಣದ ಅಭಿವೃದ್ಧಿಗೆ ಆದ್ಯತೆ : ಸರಸ್ವತಿ ಕನಕಪ್ಪ
ಲೋಕದರ್ಶನ ವರದಿ
ಕನಕಗಿರಿ 16 : ಮಳೆಯ ಅಭಾವದಿಂದ ಅಂತರ ಜಲಮಟ್ಟ ಕಡಿಮೆಯಾಗಿದ್ದು, ಕುಡಿಯುವ ನೀರು ಸೇರಿದಂತೆ ಪಟ್ಟಣದ ಪಟ್ಟಣದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಪ.ಪಂ.ನೂತನ ಅಧ್ಯಕ್ಷೆ ಸರಸ್ವತಿ ಕನಕಪ್ಪ ಎಂದರು.
ಪಟ್ಟಣ ಪಂಚಾಯಿತಿಯಲ್ಲಿ ಮಂಗಳವಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ಸಿ.ಸಿ.ರಸ್ತೆ, ಚರಂಡಿ, ವಿದ್ಯುತ್ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಲಾಗುವುದು ಅಧಿಕಾರ ಅವಧಿ ಕಡಿಮೆ ಇದ್ದು, ಪಕ್ಷ ಬೇಧ ಮರೆತು ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು. ಸಕರ್ಾರದಿಂದ ಜಾರಿಗೊಳಿಸಿ ಯೋಜನೆಗಳನ್ನು ಪ್ರತಿ ಒಬ್ಬರಿಗೂ ತಲುಪಿಸುವಂತೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಲಾಗುವುದು. ಪಟ್ಟಣದ ಅಭಿವೃದ್ದಿ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಎಂದರು.
ಸನ್ಮಾನ : ಹಸಿರು ಸೇನ ರೈತ ಸಂಘ ಸೇರಿದಂತೆ ಅನೇಕರು ಪ.ಪಂ.ನೂತನ ಅಧ್ಯಕ್ಷೆ ಸರಸ್ವತಿ ಕನಕಪ್ಪ ಅವರಿಗೆ ಸನ್ಮಾನಿಸಿದ್ದರು.
ಈ ಸಂದರ್ಭದಲ್ಲಿ ಪ.ಪಂ.ಉಪಾಧ್ಯಕ್ಷ ಹುಲುಗಪ್ಪ ವಾಲೇಕಾರ, ಪ್ರಮುಖರಾದ ಡಾ. ದೊಡ್ಡಯ್ಯ ಅರವಟಗಿಮಠ, ಮಹಾತೇಶ ಸಜ್ಜನ್, ವಾಗೇಶ ಹಿರೇಮಠ, ಬಿ.ಕನಕಪ್ಪ, ಶರಣಪ್ಪ ಭಾವಿಕಟ್ಟೆ, ಬಸಣ್ಣ ಸಮಗಂಡಿ, ಸಣ್ಣ ಕನಕಪ್ಪ, ಹರೀಶ ಪೂಜಾರ, ರಂಗಪ್ಪ ಕೊರಗಟಗಿ, ಹುಲಿಗೆಮ್ಮ ನಾಯಕ ಸೇರಿದಂತೆ ಪ.ಪಂ. ಸದಸ್ಯರು ಇದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 