ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಕೈದಿ: ಚಿಕಿತ್ಸೆ ಫಲಿಸದೆ ಸಾವು

ಬೆಳಗಾವಿ 16 : ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಕೈದಿ ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟಿದ್ದಾನೆ.

ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇರುವ ಬಳ್ಳಾರಿ ಮೂಲದ ಗೀರೀಶ ಎಂಬ ಕೈದಿ ಆತ್ಮಹತ್ಯೆಗೆ ಶರಣಾದ ಖೈದಿಯಾಗಿದ್ದಾನೆ.  ಸೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕೈದಿ ಗೀರೀಶನ್ನು ಗಮನಿಸಿದ ಸಹ ಕೈದಿಗಳು ಕೂಡಲೆ ಜೈಲಿನ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಬಳಿಕ ಖೈದಿ ಗೀರೀಶನನ್ನು ಬಿಮ್ಸ್‌  ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟಿದ್ದಾನೆ.