ಇನ್ನಿಂಗ್ಸ್ ಆರಂಭಿಸಲಿರುವ ಪೃಥ್ವಿ-ಮಯಾಂಕ್, ಐದನೇ ಸ್ಥಾನದಲ್ಲಿ ಕೆ.ಎಲ್
ನವದೆಹಲಿ, ಫೆ.4- ಉಪನಾಯಕ ರೋಹಿತ್ ಶರ್ಮಾ ಗಾಯದಿಂದ ಬಳಲಿದ್ದು, ಕಿವೀಸ್ ಸರಣಿಯಿಂದ ಹೊರಗುಳಿದಿದ್ದಾರೆ. ಟಿ-20 ಸರಣಿ ಕ್ಲೀನ್ ಸ್ವೀಪ್ ಮಾಡಿರುವ ಟೀಮ್ ಇಂಡಿಯಾ ಮತ್ತೊಂದು ಮೈಲುಗಲ್ಲಿನ ನಿರೀಕ್ಷೆಯಲ್ಲಿದೆ.
ಗಾಯದಿಂದಾಗಿ ರೋಹಿತ್ ಏಕದಿನ ಮತ್ತು ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಹ್ಯಾಮಿಲ್ಟನ್ನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಪೃಥ್ವಿ ಶಾ ಮತ್ತು ಮಾಯಾಂಕ್ ಅಗರ್ ವಾಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ರಾಹುಲ್ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬ ಬಲ್ಲರು.
ಗಾಯಗೊಂಡ ರೋಹಿತ್ ಬದಲಿಗೆ ಮಯಾಂಕ್ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಶಾ ಏಕದಿನ ಪಂದ್ಯಕ್ಕೆ ಪಾದಾರ್ಪಣೆ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ಗಾಯಗೊಂಡ ಶಿಖರ್ ಧವನ್ ಬದಲಿಗೆ ಪೃಥ್ವಿ ತಂಡ ಸೇರಿದ್ದರು. ರೋಹಿತ್ ಮತ್ತು ಶಿಖರ್ ಇಬ್ಬರೂ ಏಕದಿನ ತಂಡದಿಂದ ಹೊರ ನಡೆದ ಬಳಿಕ ಮತ್ತೊಂದು ಹೊಸ ಆರಂಭಿಕ ಜೋಡಿ ಭಾರತದ ಪರ ಇನ್ನಿಂಗ್ಸ್ ಆರಂಭಿಸಲಿದೆ.
"ಪೃಥ್ವಿ ತಂಡದಲ್ಲಿದ್ದಾರೆ ಮತ್ತು ರೋಹಿತ್ ಬದಲಿಗೆ ಮಾಯಾಂಕ್ ಸ್ಥಾನ ಪಡೆದಿದ್ದಾರೆ. ಏಕದಿನ ಪಂದ್ಯದಲ್ಲಿ ರಾಹುಲ್ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದು, ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ” ಎಂದು ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 