ವೈದ್ಯಕೀಯ ತಪಾಸಣೆಗೆ ಒಳಗಾಗುವಂತೆ ಸೋಂಕಿತ ವ್ಯಕ್ತಿ ಸಂಚರಿಸಿದ್ದ ಖಾಸಗಿ ಬಸ್ ಪ್ರಯಾಣಿಕರಿಗೆ ಸೂಚನೆ
ಮಂಗಳೂರು, ಏ.19,ಮಾರ್ಚ್ 20 ರಂದು ಬೆಂಗಳೂರಿನಿಂದ ಮಂಗಳೂರಿಗೆ ಕೊರೊನಾ ಸೋಂಕು ದೃಢಪಟ್ಟ ಉಪ್ಪಿನಂಗಡಿ ಮೂಲದ 39 ವರ್ಷದ ವ್ಯಕ್ತಿಯು ಸಂಚರಿಸಿದ್ದು ಈ ಖಾಸಗಿ ಬಸ್ನಲ್ಲಿ ಸಂಚಾರ ಮಾಡಿದ್ದ ಎಲ್ಲಾ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆಗೆ ಒಳಗಾಗಲು ದ. ಕ. ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಖಾಸಗಿ ಕೆಲಸದ ಕಾರಣದಿಂದಾಗಿ ದೆಹಲಿಗೆ ಹೋಗಿದ್ದ ಈ ವ್ಯಕ್ತಿ ಮಾರ್ಚ್ 20 ರಂದು ಬೆಂಗಳೂರಿಗೆ ಬಂದಿದ್ದು ಅಲ್ಲಿಂದ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಮಂಗಳೂರಿಗೆ ಭಾರತ್ ಟ್ರಾವೆಲ್ಸ್ (ಕೆ.ಎ.51 ಎಡಿ 5832) ಬಸ್ಸಿನಲ್ಲಿ ಪ್ರಯಾಣ ಮಾಡಿದ್ದರು. ಬಸ್ನಲ್ಲಿ ಒಟ್ಟು 32 ಜನರು ಪ್ರಯಾಣಿಕರಿದ್ದು ಅವರೆಲ್ಲರೂ ಕೂಡಲೇ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ತಾಲೂಕು ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.ಈ ಮಧ್ಯೆ ಸೋಂಕಿತ ವ್ಯಕ್ತಿಗಳು ಇರುವ ಪ್ರದೇಶವನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ. ಸೋಂಕಿತರ ಪತ್ತೆಯಾಗಿರುವ ಸಂಪ್ಯ, ಉಪ್ಪಿನಂಗಡಿ, ಕರಾಯ, ತೊಕ್ಕೊಟ್ಟು, ತುಂಬೆ, ಸಜಿಪನಡು, ಸುಳ್ಯದ ಅಜ್ಜಾವರ ಸೇರಿದಂತೆ ಜಿಲ್ಲೆಯ 7 ಗ್ರಾಮಗಳ ನಿರ್ದಿಷ್ಟ ಪ್ರದೇಶವನ್ನು ನಿಯಂತ್ರಿತ ವಲಯ ಎಂದು ಜಿಲ್ಲಾಧಿಕಾರಿ ಘೋಷಿಸಿದ್ದಾರೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 