ಪ್ರಿಯಾಂಕಾ ಗೆ ಟಿಕೆಟ್ ನಿರಾಕರಣೆ : ಜೇಟ್ಲಿ ಬೇಸರ
ನವದೆಹಲಿ, ಏ26 ಉತ್ತರ ಪ್ರದೇಶದಲ್ಲಿ ಪಕ್ಷವನ್ನು ಕಟ್ಟಿ ಆ ಮೂಲಕ ದೇಶದಲ್ಲಿ ಅಧಿಕಾರ ಹಿಡಿಯಲು ಹೊರಟ ಕಾಂಗ್ರೆಸ್ ಪಕ್ಷ ವಾರಣಾಸಿಯಲ್ಲಿ ಪ್ರಿಯಾಂಕಾ ವಾದ್ರ ಅವರಿಗೆ ಟಿಕೆಟ್ ನಿರಾಕರಿಸುವ ಮೂಲಕ ಬಹಳ ಅನ್ಯಾಯ ಮಾಡಿದೆ. ಇದು ತಮಗೆ ನೋವು ಮತ್ತು ನಿರಾಶೆ ಉಂಟು ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಬೇಸರ ವ್ಯಕ್ತಪಡಿಸಿರುವ ಅವರು, ಪ್ರಿಯಾಂಕ ಅವರಿಗೆ ಟಿಕೆಟ್ ನಿರಾಕರಿಸುವ ಮೂಲಕ ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನವೇ ಸೋಲೊಪ್ಪಿಕೊಂಡಿದೆ ಎಂದು ಹೇಳಿದರು. ಪ್ರಿಯಾಂಕಾ ಅವರಿಂದಲೇ ಕಾಂಗ್ರೆಸ್ ಉದ್ಧಾರ ಸಾಧ್ಯ ಎಂದು ನಂಬಿಕೊಂಡಿದ್ದ ಪಕ್ಷ ಅವರಿಗೆ ಟಿಕೆಟ್ ವಂಚನೆ ಮಾಡಿರುವುದು ನನಗೆ ನೋವು ಮತ್ತು ನಿರಾಶೆ ತಂದಿದೆ ಎಂದು ಅವರು ಲೇವಡಿ ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 