ಮಿರ್ಜಾಪುರ ವಿಂಧ್ಯವಾಸಿನಿಗೆ ಪ್ರಿಯಾಂಕಾ ನಮನ
ಮಿರ್ಜಾಪುರ, ಮಾ 19: ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುವ ಉದ್ದೇಶ ಹೊಂದಿರುವ ಪೂರ್ವ ಉತ್ತರಪ್ರದೇಶದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಗಂಗಾ ಯಾತ್ರೆ’ ಮುಂದುವರಿಸಿದ್ದು, ಮಂಗಳವಾರ ಮಿರ್ಜಾಪುರ ತಲುಪಿದರು.
ರಸ್ತೆ ಮಾರ್ಗವಾಗಿ ವಿಂಧ್ಯವಾಸಿನಿ ದೇವಾಲಯ ತಲುಪಿದ ಅವರು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕಾಂತಿ ಶರೀಫ್ ದರ್ಗಾಕ್ಕೆ ಭೇಟಿ ನೀಡಿದರು. ಸುಮಾರು 5 ಗಂಟೆ ತಡವಾಗಿ ತಲುಪಿದ್ದರಿಂದ ಈ ಮೊದಲೇ ಯೋಜಿಸಿದ್ದ ವಿಶ್ವವಿಖ್ಯಾತ ತ್ರಿಕೋನ ಪರಿಕ್ರಮ ಕೈಬಿಡಲಾಯಿತು.
ಪ್ರಿಯಾಂಕಾ ಭೇಟಿ ಹಿನ್ನೆಲೆಯಲ್ಲಿ ವಿಂಧ್ಯವಾಸಿನಿ ದೇವಾಲಯಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಾಬಲ್ಯವಿರುವೆಡೆ ಗಂಗಾ ಯಾತ್ರೆ ಕೈಗೊಂಡಿರುವ ಪ್ರಿಯಾಂಕಾ, ಪ್ರಯಾಗ್ ರಾಜ್ ನಿಂದ ವಾರಾಣಸಿಗೆ ಗಂಗಾ ನದಿ ಮಾರ್ಗವಾಗಿ ಭೇಟಿ ನೀಡಲಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 