ಮಿರ್ಜಾಪುರ ವಿಂಧ್ಯವಾಸಿನಿಗೆ ಪ್ರಿಯಾಂಕಾ ನಮನ
ಮಿರ್ಜಾಪುರ, ಮಾ 19: ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುವ ಉದ್ದೇಶ ಹೊಂದಿರುವ ಪೂರ್ವ ಉತ್ತರಪ್ರದೇಶದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಗಂಗಾ ಯಾತ್ರೆ’ ಮುಂದುವರಿಸಿದ್ದು, ಮಂಗಳವಾರ ಮಿರ್ಜಾಪುರ ತಲುಪಿದರು.
ರಸ್ತೆ ಮಾರ್ಗವಾಗಿ ವಿಂಧ್ಯವಾಸಿನಿ ದೇವಾಲಯ ತಲುಪಿದ ಅವರು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕಾಂತಿ ಶರೀಫ್ ದರ್ಗಾಕ್ಕೆ ಭೇಟಿ ನೀಡಿದರು. ಸುಮಾರು 5 ಗಂಟೆ ತಡವಾಗಿ ತಲುಪಿದ್ದರಿಂದ ಈ ಮೊದಲೇ ಯೋಜಿಸಿದ್ದ ವಿಶ್ವವಿಖ್ಯಾತ ತ್ರಿಕೋನ ಪರಿಕ್ರಮ ಕೈಬಿಡಲಾಯಿತು.
ಪ್ರಿಯಾಂಕಾ ಭೇಟಿ ಹಿನ್ನೆಲೆಯಲ್ಲಿ ವಿಂಧ್ಯವಾಸಿನಿ ದೇವಾಲಯಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಾಬಲ್ಯವಿರುವೆಡೆ ಗಂಗಾ ಯಾತ್ರೆ ಕೈಗೊಂಡಿರುವ ಪ್ರಿಯಾಂಕಾ, ಪ್ರಯಾಗ್ ರಾಜ್ ನಿಂದ ವಾರಾಣಸಿಗೆ ಗಂಗಾ ನದಿ ಮಾರ್ಗವಾಗಿ ಭೇಟಿ ನೀಡಲಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 