ಕೃಷಿ ಸಾಲ ಮನ್ನಾ ಕುರಿತು ಮೋದಿ ಸರ್ಕಾರವನ್ನು ಟೀಕಿಸಿದ ಪ್ರಿಯಾಂಕಾ
ನವದೆಹಲಿ, ಅಕ್ಟೋಬರ್ 11: ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ (ಪಿಎಮ್ಸಿ) ಸಂಕಷ್ಟದಲ್ಲಿದ್ದು, ಕೇಂದ್ರ ಸರ್ಕಾರ 76,000 ಕೋಟಿ ರೂ.ಗಳ ಸಾಲವನ್ನು ಯಾರಿಗೆ ಮನ್ನಾ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಪ್ರಶ್ನಿಸಿದ್ದಾರೆ. ಪಿಎಮ್ಸಿ ಬ್ಯಾಂಕ್ ವಂಚನೆಯನ್ನು ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿರುವ ಅವರು, ಪಿಎಮ್ಸಿ ಬ್ಯಾಂಕಿನೊಂದಿಗೆ ಖಾತೆದಾರರು ಸಂಕಷ್ಟದಲ್ಲಿದ್ದಾರೆ ಮತ್ತು ಸಹಾಯಕ್ಕಾಗಿ ಕೋರುತ್ತಿದ್ದಾರೆ ಎಂದಿದ್ದಾರೆ. ಎಸ್ಬಿಐ 76000 ಕೋಟಿ ರೂ.ಗಳ ಅನುತ್ಪಾದಕ ಸಾಲವನ್ನು ಹೊಂದಿದ್ದು, ಸುಮಾರು 220 ಜನ ಈಗ ಅದನ್ನು ಮರುಪಾವತಿಸಲು ಸಾಧ್ಯವಾಗುತ್ತಿಲ್ಲ ಎಂದಿದೆ. ಈ ಅಂಶ ಆರ್ಟಿಐ ಮೂಲಕ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಪ್ರಿಯಾಂಕ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 76000 ಕೋಟಿ ರೂ.ಗಳ ಸಾಲವನ್ನು ಸರ್ಕಾರ ಯಾರಿಗೆ ಮನ್ನಾ ಮಾಡುತ್ತಿದೆ ಎಂದು ಸುದ್ದಿ ವರದಿಯನ್ನು ಉಲ್ಲೇಖಿಸಿದ ಅವರು, ಬಡ ರೈತರು, ಪಿಎಮ್ಸಿ ಬ್ಯಾಂಕ್ಗೆ ಸಂಬಂಧಿಸಿದ ಜನರು ಸಂಕಷ್ಟದಲ್ಲಿದ್ದಾರೆ ಎಂದರು. ರೈತರನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ಆರ್ಥಿಕತೆಯು ಅಸ್ತವ್ಯಸ್ತವಾಗಿದೆ. ಜನರನ್ನು ತಮ್ಮ ಉದ್ಯೋಗದಿಂದ ವಜಾ ಮಾಡಲಾಗುತ್ತಿದೆ, ಪಿಎಮ್ಸಿ ಬ್ಯಾಂಕ್ಗೆ ಸಂಬಂಧಿಸಿದ ಜನರು ಅಳುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 