ಮಿರ್ಜಾಪುರ: ಬೆದರಿಕೆಗಳಿಗೆ ಬಗ್ಗುವುದಿಲ್ಲ: ಪ್ರಿಯಾಂಕಾ
ಮಿರ್ಜಾಪುರ, ಮಾ 20: ಪ್ರಧಾನಿ ನರೇಂದ್ರ ಮೋದಿಯವರ ‘ಕುಟುಂಬ ರಾಜಕಾರಣ’ ಟೀಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ತಮ್ಮನ್ನು ಹೆದರಿಸುವ ಪ್ರಯತ್ನಗಳು ನಡೆಯುತ್ತಿವೆಯಾದರೂ ತಾವು ಹೆದರುವುದಿಲ್ಲ ಎಂದು ಹೇಳಿದ್ದಾರೆ.
ವಾರಾಣಸಿಯಿಂದ ಮಿರ್ಜಾಪುರಕ್ಕೆ ತೆರಳುವ ಮುನ್ನ ಸುದ್ದಿಗಾರರ ಜತೆ ಅವರು ಮಾತನಾಡಿ, ಅಧಿಕಾರದಲ್ಲಿರುವ ಮಂದಿ, ತಾವು ಇತರರನ್ನು ಹೆದರಿಸಬಹುದು ಮತ್ತು ಮರುಳು ಮಾಡಬಹುದು ಎಂಬ ಎರಡು ತಪ್ಪು ಗ್ರಹಿಕೆ ಹೊಂದಿದ್ದಾರೆ ಎಂದು ವ್ಯಂಗ್ಯವಾಡಿದರು.
ಹೋರಾಟದ ಹಾದಿ ಸುದೀರ್ಘವಾಗಿದೆ, ತಾವು ಎಷ್ಟು ಘಾಸಿಗೊಂಡರೂ ಪರವಾಗಿಲ್ಲ. ಜನರ ಹಿತಾಸಕ್ತಿಗಾಗಿ ಹೋರಾಟ ಮತ್ತು ಪ್ರಚಾರ ಮುಂದುವರಿಯಲಿದೆ ಎಂದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ದೇಶದ ಸಾರ್ವಜನಿಕ ಸಂಸ್ಥೆಗಳು ನಾಶಗೊಂಡಿವೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು “ಕಾಂಗ್ರೆಸ್ ಪಕ್ಷವು ಮುಕ್ತ ಅಭಿವ್ಯಕ್ತಿ ಸ್ವಾತಂತ್ರ್ಯ ಮೊಟಕುಗೊಳಿಸುತ್ತಿದೆ ಮತ್ತು ಸಾರ್ವಜನಿಕ ಸಂಸ್ಥೆಗಳಿಗೆ ಕುಂದುಂಟು ಮಾಡುತ್ತಿದೆ” ಎಂದು ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರು ಮೊನಚಾಗಿ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 