ಮಂತ್ರಾಲಯದ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಶೋಭಯಾತ್ರೆ

ಮಂತ್ರಾಲಯದ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಶೋಭಯಾತ್ರೆ  Procession of Dr. Subudhendra Theertha Sripadamgala of Mantralaya

ಲೋಕದರ್ಶನ ವರದಿ   

ಯಲಬುರ್ಗಾ 11 : ಪಟ್ಟಣದ ರಾಘವೇಂದ್ರ ಸ್ವಾಮಿಗಳವರ ಮಠದ 50ನೇ ವರ್ಷದ ಸುವರ್ಣ ಮಹೋತ್ಸವದ ನಿಮಿತ್ಯ ಮಂತ್ರಾಲಯದ ಡಾ.ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಶೋಭಯಾತ್ರೆ ಶುಕ್ರವಾರ ಸಂಜೆ ವಿಜೃಂಭಣೆಯಿಂದ  ನಡೆಯಿತು.ಇಲ್ಲಿಯ ಪಾಂಡುರಂಗ ದೇವಸ್ಥಾನದಿಂದ ಆರಂಭಗೊಂಡ ಮಂತ್ರಾಲಯದ ಡಾ.ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಶೋಭಯಾತ್ರೆ ವಿವಿಧ ವಾಧ್ಯ ಮೇಳದೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಯಾತ್ರೆ ನಡೆಯಿತು. ನಂತರ ಮಂತ್ರಾಲಯದ ಡಾ.ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಶೋಭಯಾತ್ರೆಯು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ತೆರಳಿತು. ಈ ಶೋಭಯಾತ್ರೆಯಲ್ಲಿ ರಾಘವೇಂದ್ರ ಸ್ವಾಮಿಗಳ ಮಠದ ಅಪಾರ ಭಕ್ತ ಸಮೂಹ ಭಾಗವಹಿಸಿ ಶ್ರೀಗಳ ಆಶೀರ್ವಾದ ಪಡೆದು ಪುನೀತರಾದರು.