ಗಂಗಾಜಲ ಚೌಡೇಶ್ವರಿ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ
Procession of Utsava Murti of Goddess Gangajala Chaudeshwari
ಗಂಗಾಜಲ ಚೌಡೇಶ್ವರಿ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ
ರಾಣಿಬೆನ್ನೂರ 15: ನಗರದ ಮೇಡ್ಲೇರಿ ರಸ್ತೆಯ ಗ್ರಾಮದೇವತೆ ಗಂಗಾಜಲ ಚೌಡೇಶ್ವರಿ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆಯು ಸಹಸ್ರಾರು ಭಕ್ತರ, ಅಭಿಮಾನಿಗಳ ಮಧ್ಯ ಸೋಮವಾರ ರಾತ್ರಿ 8 ಗಂಟೆಯಿಂದ ಮಂಗಳವಾರ ಬೆಳಗಿನ ಜಾವ 5 ಂಟೆಯವರೆಗೂ ಅದ್ದೂರಿಯಾಗಿ ನೆರವೇರಿತು.
ಇಲ್ಲಿನ ತಳವಾರ ಗಲ್ಲಿಯ ಮೂಲ ದೇವಸ್ಥಾನದಿಂದ ಹೊರಟ ಮೆರವಣಿಗೆಗೆ ಶಾಸಕ ಪ್ರಕಾಶ್ ಕೋಳಿವಾಡ್ ಚಾಲನೆ ನೀಡಿದರು. ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ, ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ಸಮಿತಿ ಅಧ್ಯಕ್ಷ ಬಸವರಾಜ ನಾಯಕ, ಕಾರ್ಯದರ್ಶಿ ನಾರಾಯಣಪ್ಪ ಬಿಷ್ಟಣ್ಣನವರ, ಶಶಿಧರ ಬಸೇನಾಯ್ಕರ, ಶಾಂತಲಿಂಗಪ್ಪ ಅಣಜೇರ, ಕೆ. ಶಿವಲಿಂಗಪ್ಪ, ಎಸ್.ಎಸ್ ರಾಮಲಿಂಗಣ್ಣನವರ್ ಸೇರಿದಂತೆ ಮತ್ತಿತರರು ಹಾಗೂ ಸವಿರಾರು ಭಕ್ತರು ಭಾಗವಹಿಸಿದ್ದರು.
ಗ್ರಾಮೀಣ ಸೊಗಡಿನ ಕೋಲಾಟ, ಕುದುರೆ ಕುಣಿತ, ಛಾಮರಸ,ಬಣ್ಣಬಣ್ಣದ ಸಿಡಿಮದ್ದು, ಕತ್ತಿ ವರಸೆ, ಲೇಜೀಮ್, ಸಮಾಳ, ಮಹಿಳೆಯರ ಡೊಳ್ಳು ಕುಣಿತ, ಸೇರಿದಂತೆ ಮತ್ತಿತರ ವಾಧ್ಯಮೇಳಗಳು ಮೆರವಣಿಗೆಗೆ ಸಾಥ ನೀಡಿದವು. ಜೊತೆಗೆ ಡಿಜೆ ಸದ್ದಿಗೆ ಯುವ ಜನತೆ ಕುಣಿದು ಕುಪ್ಪಳಿಸಿದರು.
ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಟು ಮಂಗಳವಾರ ಬೆಳಗಿನ ಜಾವ ಮೆಡ್ಡೇರಿ ರಸ್ತೆಯಲ್ಲಿನ ಚೌಡೇಶ್ವರಿ ದೇವಸ್ಥಾನದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಲಾಯತು. ಜ.18ರವರೆಗೂ ದೇವಿಯ ಜಾತ್ರೋತ್ಸವ ನಡೆಯಲಿದೆ.
ಫೋಟೊ15ಆರ್ಎನ್ಆರ್01ರಾಣಿಬೆನ್ನೂರ: ಸ್ಥಳೀಯ ಗ್ರಾಮದೇವತೆ ಶ್ರೀ ಗಂಗಾಜಲ ಚೌಡೇಶ್ವರಿ ದೇವಿಯ ಮೆರವಣಿಗೆಯು ಸಹಸ್ರಾರು ಭಕ್ತರ, ಅಭಿಮಾನಿಗಳ ಮಧ್ಯ ಸೋಮವಾರ ರಾತ್ರಿ ಅದ್ದೂರಿಯಾಗಿ ನೆರವೇರಿತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 