ಕಕ್ಕೇರಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧ
ಲೋಕದರ್ಶನ ವರದಿ
ಕಕ್ಕೇರಿ 06: ಅಕ್ಟೋಬರ್ 7 ರಿಂದ ಜರುಗುವ ಭಿಷ್ಟಾದೇವಿ ಜಾತ್ರೆಯಲ್ಲಿ ಭಕ್ತರು ಯಾವುದೇ ಕಾರಣಕ್ಕೂ ಪ್ರಾಣಿ ಬಲಿ ನೀಡಬಾರದು. ಪ್ರಾಣಿ ಬಲಿ ನೀಡುವುದು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಖಾನಾಪೂರ ಸಿಪಿಐ ಮೊತಿಲಾಲ್ ಪವಾರ್ ಹೇಳಿದರು. ದೇವಸ್ಥಾನದಲ್ಲಿ ಜರುಗಿದ ಶಾಂತಿ ಪಾಲನೆ ಹಾಗೂ ಪ್ರಾಣಿ ಬಲಿ ನಿಷೇಧ ಸಭೆಯಲ್ಲಿ ಅವರು ಮಾತನಾಡಿ, ಜಾತ್ರೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಪ್ರತಿಯೊಬ್ಬರೂ ನೋಡಿಕೊಳ್ಳಬೇಕು.ಅಂಗಡಿ ಹಾಕುವವರು ರಾಜ್ಯ ಹೆದ್ದಾರಿಯಿಂದ 10 ಅಡಿ ಬಿಟ್ಟು ಕೊಡಬೇಕು ಎಂದು ಹೇಳಿದರು.
ನಂದಗಡ ಪೋಲಿಸ್ ಠಾಣೆಯ ಪಿಎಸ್ಐ ಸುಮಾ ನಾಯಕ ಜಾತ್ರೆ ಹಿನ್ನೆಲೆಯಲ್ಲಿ ಅಕ್ಟೋ ಬರ್ 7 ರಿಂದ 14 ರ ವರೆಗೆ ತಾಳಗುಪ್ಪ-ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಸಾಗುವ ಭಾರಿ ವಾಹನಗಳನ್ನು ನಿಷೇಧಿಸಲಾಗಿದೆ.ಯಲ್ಲಾಪೂರ ದಿಂದ ಬೆಳಗಾವಿ ಕಡೆಗೆ ಬರುವ ವಾಹನಗಳು ರಾಮನಗರ ಮತ್ತು ಬೆಳಗಾವಿ ಯಿಂದ ಬರುವ ವಾಹನಗಳು ಬೀಡಿ ಮಾರ್ಗವಾಗಿ ಕಿತ್ತೂರಿಗೆ ಹೋಗಬೇಕು ಎಂದು ಹೇಳಿದರು. ಬಹುಸಂಖ್ಯೆಯಲ್ಲಿ ಜಾತ್ರಾ ಕಮಿಟಿಯ ಪದಾಧಿಕಾರಿಗಳು, ಅಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 