ಅಕ್ರಮ ಮದ್ಯ ಮಾರಾಟ ನಿಷೇದಕ್ಕೆ ಆಗ್ರಹ
ಲೋಕದರ್ಶನ ವರದಿ
ಕೊಪ್ಪಳ 02: ತಾಲೂಕಿನ ಗಿಣಿಗೇರಿ ಹತ್ತಿರ ಇರುವ ಹೊಸಕನಕಾಪುರ ಗ್ರಾಮದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ವ್ಯಾಪಕವಾಗಿ ನಡೆಯತ್ತಿದ್ದು ಶೀಘ್ರ ನಿಲುಗಡೆಗೊಳಿಸಬೇಕೆಂದು ಗ್ರಾಮದ ಮಹಿಳೆಯರು ಮತ್ತು ಯುವಕರು ಸ್ವಯಂ ಪ್ರೇರಿತರಾಗಿ ಅಪರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿ ಮಾರಾಟಗಾರರ ವಿರುದ್ಧ ದೂರು ನೀಡಿದರು. ತದನಂತರ ಸಂಬಂಧಿಸಿದ ಅಬಕಾರಿ ಇಲಾಖೆಯ ಉಪ ಆಯುಕ್ತರಿಗೂ ಮನವಿ ಸಲ್ಲಿಸಿ ತಕ್ಷಣೆವೆ ಗ್ರಾಮದಲ್ಲಿ ಸಂಪೂರ್ಣ ಮದ್ಯಪಾನ ನಿಲುಗಡೆಗೊಳಿಸದಿದ್ದರೆ ಉಗ್ರ ಸ್ವರೂಪದ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.
ಈ ವೇಳೆ ಪ್ರಗತಿಪರ ಹೋರಾಟಗಾರ ಬಸವರಾಜ ಶೀಲವಂತರ, ರಾಮಣ್ಣ ಬಿ ಶೆಟ್ಟಿ, ಬಸವರಾಜ ಅಗಸರ, ಮಂಜುನಾಥ ಕಂಪಸಾಗರ, ನಾಗರಾಜ ತಳವಾರ, ಆನಂದ ಮೂರಮನಿ, ತಾಜುದ್ದೀನ್ ಹೊಸಮನಿ, ಮಂಜುಳಾ, ಈರಮ್ಮ, ಗೀತಾ, ಶಾಂತಮ್ಮ, ಸಾವಿತ್ರಿ, ಶಹನಾಜ್ ಬಿ, ಪ್ರೇಮ, ಹುಚ್ಚಮ್ಮ, ಕಸ್ತೂರಿ ಸೇರಿದಂತೆ ಗ್ರಾಮದ ಇತರ ಯುವಕರು ಹಾಗೂ ಮಹಿಳೆಯರು ಇದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 