ಅಕ್ರಮ ಮದ್ಯ ಮಾರಾಟ ನಿಷೇದಕ್ಕೆ ಆಗ್ರಹ
ಲೋಕದರ್ಶನ ವರದಿ
ಕೊಪ್ಪಳ 02: ತಾಲೂಕಿನ ಗಿಣಿಗೇರಿ ಹತ್ತಿರ ಇರುವ ಹೊಸಕನಕಾಪುರ ಗ್ರಾಮದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ವ್ಯಾಪಕವಾಗಿ ನಡೆಯತ್ತಿದ್ದು ಶೀಘ್ರ ನಿಲುಗಡೆಗೊಳಿಸಬೇಕೆಂದು ಗ್ರಾಮದ ಮಹಿಳೆಯರು ಮತ್ತು ಯುವಕರು ಸ್ವಯಂ ಪ್ರೇರಿತರಾಗಿ ಅಪರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿ ಮಾರಾಟಗಾರರ ವಿರುದ್ಧ ದೂರು ನೀಡಿದರು. ತದನಂತರ ಸಂಬಂಧಿಸಿದ ಅಬಕಾರಿ ಇಲಾಖೆಯ ಉಪ ಆಯುಕ್ತರಿಗೂ ಮನವಿ ಸಲ್ಲಿಸಿ ತಕ್ಷಣೆವೆ ಗ್ರಾಮದಲ್ಲಿ ಸಂಪೂರ್ಣ ಮದ್ಯಪಾನ ನಿಲುಗಡೆಗೊಳಿಸದಿದ್ದರೆ ಉಗ್ರ ಸ್ವರೂಪದ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.
ಈ ವೇಳೆ ಪ್ರಗತಿಪರ ಹೋರಾಟಗಾರ ಬಸವರಾಜ ಶೀಲವಂತರ, ರಾಮಣ್ಣ ಬಿ ಶೆಟ್ಟಿ, ಬಸವರಾಜ ಅಗಸರ, ಮಂಜುನಾಥ ಕಂಪಸಾಗರ, ನಾಗರಾಜ ತಳವಾರ, ಆನಂದ ಮೂರಮನಿ, ತಾಜುದ್ದೀನ್ ಹೊಸಮನಿ, ಮಂಜುಳಾ, ಈರಮ್ಮ, ಗೀತಾ, ಶಾಂತಮ್ಮ, ಸಾವಿತ್ರಿ, ಶಹನಾಜ್ ಬಿ, ಪ್ರೇಮ, ಹುಚ್ಚಮ್ಮ, ಕಸ್ತೂರಿ ಸೇರಿದಂತೆ ಗ್ರಾಮದ ಇತರ ಯುವಕರು ಹಾಗೂ ಮಹಿಳೆಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 