ಪೌರಕಾರ್ಮಿಕರ ವಿವಿಧ ಬೇಡಿಕೆಯನ್ನು ಈಡೇರಿಸುವ ಭರವಸೆ: ಪಟ್ಟಾಕಿ ಸಿಡಿಸಿ ಸಂಭ್ರಮಾಚರಣೆ
Promise to fulfill various demands of civic workers: Celebrations with bursting of firecrackers
ಜಮಖಂಡಿ 01: ರಾಜ್ಯ ಸರಕಾರ ನಗರಸಭೆಯ ಪೌರಕಾರ್ಮಿಕರ ವಿವಿಧ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದ ಹಿನ್ನಲೆಯಲ್ಲಿ ಪೌರಕಾರ್ಮಿಕರು ಅನಿರ್ಧಿಷ್ಟಾವಧಿ ಮುಷ್ಕರ್ವನ್ನು ಹಿಂಪಡೆದು ಪಟ್ಟಾಕಿ ಸಿಡಿಸಿ, ಗುಲಾಲ ಎರಚಿಕೊಂಡು ಸಂಭ್ರಮಾಚರಣೆಯನ್ನು ಮೆರದರು.
ನಂತರ ಪೌರಾಯುಕ್ತ ಜೋತಿ ಗೀರೀಶ ಮಾತನಾಡಿ ಸರಕಾರದ ಎಲ್ಲ ಇಲಾಖೆಯದಲ್ಲಿ ಕೆಲಸ ಕಾರ್ಯವನ್ನು ನಿರ್ವಹಿಸುವ ಸಹಜ ಆದರೆ ಕಷ್ಟದ ಕೆಲಸವನ್ನು ನಿರ್ವಹಿಸುವ ಇಲಾಖೆ ಯಾವುದಾದರು ಇದ್ದರೆ ಅದು ನಗರಸಭೆ. ಗಾಳಿ,ಮಳೆ, ಬಿಸಿಲು, ಚಳಿ ಎನ್ನದೆ ಕೆಲಸವನ್ನು ನಿರ್ವಹಿಸುವರು ನಗರಸಭೆಯ ಪೌರಕಾರ್ಮಿಕರು. ಕಳೆದ ನಾಲ್ಕು ದಿನಗಳ ಕಾಲ ಅನಿರ್ಧಿಷ್ಟಾವಧಿ ಮುಷ್ಕರ್ವನ್ನು ಸರಕಾರ ಪರಿಗಣಿಸಿ ವಿವಿಧ ಬೇಡಿಕೆಗಳನ್ನು ನೀಡುವ ಭರವಸೆಯನ್ನು ನೀಡಿದೆ ಎಂದು ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.
ಈ ಅನಿರ್ಧಿಷ್ಟಾವಧಿ ಮುಷ್ಕರ್ಕ್ಕೆ ವಿವಿಧ ಸಂಘಟನೆಗಳು, ಸಾರ್ವಜನಿಕರು, ಮುಖಂಡರು ಸಹ ಸಹಕಾರ ನೀಡಿದ್ದಾರೆ. ನಮ್ಮ ಪೌರಕಾರ್ಮಿಕರು ದಿನನಿತ್ಯವಾಗಿ ಜಮಖಂಡಿ ನಗರವನ್ನು ಹೇಗೆ ಸ್ವಚ್ಛವಾಗಿಡುತ್ತಾರೆ. ಹಾಗೆ ಇಂದಿನಿಂದ ಕಸದ ರಾಶಿಯನ್ನು ಸ್ವಚ್ಛ ಮಾಡುತ್ತಾರೆ. ನಗರವನ್ನು ಸುಂದರವಾಗಿ ಕಾಣುವಂತೆ ಕೆಲಸ,ಕಾರ್ಯವನ್ನು ನಿರ್ವಹಿಸುತ್ತಾರೆ ಎಂದರು.
ಇದೇ ಸಂದರ್ಭದಲ್ಲಿ ನಗರಸಭೆಯ ಇಳಾಕೆಯ ಸಿಬ್ಬಂದಿಗಳಿಗೆ ಹಾಗೂ ಪೌರಾಯುಕ್ತರಿಗೆ ಪೌರಕಾರ್ಮಿಕರು ಸೇರಿಕೊಂಡು ಸನ್ಮಾನಿಸಿದರು. ನಂತರ ಪಟ್ಟಾಕಿಯನ್ನು ಸಿಡಿಸಿ, ಗುಲಾಲ ಎರಚಿಕೊಂಡು ಸಂತಸವನ್ನು ಹಂಚಿಕೊಂಡರು. ನಗರದ ಅಂಬೇಡ್ಕರ್ ಸರ್ಕಲ್ಗೆ ತರಳಿ ಡಾ,ಬಿ,ಆರ್,ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರಿ್ಣಯನ್ನು ಮಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 