ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಆಸ್ತಿ ಮುಟ್ಟುಗೋಲು ಸಾಧ್ಯತೆ
Property worth Rs 15 thousand crore belonging to Bollywood star Saif Ali Khan's family is likely to
ಭೋಪಾಲ್ 22: ಮಧ್ಯಪ್ರದೇಶದಲ್ಲಿ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಅವರು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕೊಹೆಫಿಜಾ ಪ್ರದೇಶದಿಂದ ಭೋಪಾಲ್ನ ಚಿಕ್ಲೋಡ್ವರೆಗೆ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬದ ಪೂರ್ವಿಕರ ಆಸ್ತಿ ವಿಸ್ತರಿಸಿದೆ. ಇದನ್ನು ಶತ್ರು ಆಸ್ತಿ ಎಂದು 2014ರಲ್ಲಿ ಕೇಂದ್ರ ಸರ್ಕಾರ ಘೋಷಿಸಿತ್ತು. ಈ ಆಸ್ತಿ ಮೇಲೆ ಪಟೌಡಿ ಕುಟುಂಬದ ಉತ್ತರಾಧಿಕಾರಿಗೆ ಯಾವುದೇ ಹಕ್ಕು ಇರುವುದಿಲ್ಲ ಎಂದು ಸ್ಪಷ್ಟಪಡಿಸಿ ನೋಟಿಸ್ ಜಾರಿ ಮಾಡಲಾಗಿತ್ತು.
1968ರ ಶತ್ರು ಆಸ್ತಿ ಕಾಯ್ದೆಯ ಅಡಿಯಲ್ಲಿ ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವ ಸಾಧ್ಯತೆಯಿದೆ. 1968ರ ಶತ್ರು ಆಸ್ತಿ ಕಾಯ್ದೆಯ ಪ್ರಕಾರ, 1947 ರ ವಿಭಜನೆಯ ನಂತರ ಪಾಕಿಸ್ತಾನಕ್ಕೆ ವಲಸೆ ಹೋದ ವ್ಯಕ್ತಿಗಳ ಒಡೆತನದ ಆಸ್ತಿಯನ್ನು ಕೇಂದ್ರ ಸರ್ಕಾರವು ಹಕ್ಕು ಸಾಧಿಸಬಹುದಾಗಿದೆ.
ಸರ್ಕಾರ ಈ ಧೋರಣೆಯನ್ನು ಪ್ರಶ್ನಿಸಿ ಸೈಫ್ ಅಲಿ ಖಾನ್ ಅವರು 2015ರಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. ಈ ನೋಟಿಸ್ ವಿರುದ್ಧ ಸೈಫ್ ಅಲಿ ಖಾನ್ ಪಟೌಡಿ ಕುಟುಂಬ ಸಲ್ಲಿಸಿದ್ದ ಅರ್ಜಿಯನ್ನು ಮಧ್ಯಪ್ರದೇಶದ ಹೈಕೋರ್ಟ್ ವಜಾಗೊಳಿಸಿದೆ. ಈ ಆಸ್ತಿಗಳ ಮೇಲೆ 2015 ರಲ್ಲಿ ವಿಧಿಸಲಾಗಿದ್ದ ತಡೆಯಾಜ್ಞೆಯನ್ನು ಮಧ್ಯಪ್ರದೇಶ ಹೈಕೋರ್ಟ್ ತೆಗೆದುಹಾಕಿದೆ.
ಡಿ. 13 ರಂದು ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್, 2017ರ ತಿದ್ದುಪಡಿ ಮಾಡಿದ ಶತ್ರು ಆಸ್ತಿ ಕಾಯ್ದೆ ಅಡಿ ಶಾಸನಬದ್ಧ ಪರಿಹಾರವಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 30 ದಿನಗಳಲ್ಲಿ ಪ್ರಾತಿನಿಧ್ಯ ಸಲ್ಲಿಸಬೇಕೆಂದು ಪಟೌಡಿ ಕುಟುಂಬಕ್ಕೆ ಸೂಚಿಸಿತ್ತು. ಇಂದಿನಿಂದ ಈ ಆದೇಶಕ್ಕೆ ಸಂಬಂಧಿಸಿಂತೆ 30 ದಿನಗಳ ಒಳಗಡೆ ಮೇಲ್ಮನವಿ ಸಲ್ಲಿಸದಿದ್ದರೆ ಕೋರ್ಟ್ ಆದೇಶ ಪ್ರಕಟಿಸುವುದಿಲ್ಲ. ಒಂದು ವೇಳೆ ಸಲ್ಲಿಸದಿದ್ದರೆ ಕೋರ್ಟ್ ತನ್ನದೇ ಆದ ಅರ್ಹತೆಯ ಆಧಾರದ ಮೇಲೆ ಮೇಲ್ಮನವಿಯನ್ನು ಪರಿಗಣಿಸುತ್ತದೆ ಎಂದು ಹೇಳಿತ್ತು. ಇಲ್ಲಿಯವರೆಗೆ ಪಟೌಡಿ ಕುಟುಂಬಸ್ಥರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರಾ ಎಂಬುದರ ಬಗ್ಗೆ ಮಾಹಿತಿಯಿಲ್ಲ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 