ಕುಡಿಯುವ ನೀರು ಸಂರಕ್ಷಿಸಿ: ಗ್ರಾಮ ಜಾಗೃತಿ
ಲೋಕದರ್ಶನ ವರದಿ
ಹಾವೇರಿ17: ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಹಾವೇರಿ ವತಿಯಿಂದ ಜನನಿ ಜಾನಪದ ಕಲಾ ತಂಡ ಯಕ್ಲಾಸಪುರ,ರಾಣೆಬೆನ್ನೂರು ಇವರಿಂದ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗ ಆಯೋಜಿಸಿದ್ದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಗ್ರಾಮೀಣ ಭಾಗದ ಜನರಿಗೆ ಮತ್ತು ರೈತರಿಗೆ ಕುಡಿಯುವ ನೀರನ್ನು ಮಿತವಾಗಿ ಬಳಸಿ, ನೀರು ಪೊಲಾಗದಂತೆ ಸಂರಕ್ಷಿಸಿ, ಶೌಚಾಲಯ ಬಳಸಿ, ಇಂಗು ಗುಂಡಿಗಳನ್ನು ನಿಮರ್ಿಸಿ, ಅಂತರ್ಜಲ ಮಟ್ಟವನ್ನು ಹೆಚ್ಚಿಸಿಕೊಳ್ಳಿ, ಜಮೀನಿನ ಸುತ್ತಲೂ ಸಸಿಗಳನ್ನು ನೆಡಿ ಎಂದು ಜಾಗೃತಿ ಮೂಡಿಸಲಾಯಿತು. ರೈತರು ತಮ್ಮ ಜಮೀನಿನಲ್ಲಿ ಬದುಗಳನ್ನು ಹಾಕಿಸಿ, ಮಣ್ಣಿನ ಸವಕಳಿಯನ್ನು ತಡೆಗಟ್ಟುವ ಕುರಿತು ಮಾಹಿತಿಯನ್ನು ನೀಡಿದರು. ಹಾಗೂ ವಿವಿಧ ಯೊ?ಜನೆಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಕೊನೆಯಲ್ಲಿ ರೈತ ಗೀತೆ, ಸ್ವಚ್ಛತಾ ಗೀತೆ ಹೇಳಲಾಯಿತು ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಶಿವಲಿಂಗಪ್ಪ ದಾಸಣ್ಣನವರ, ರಾಮಣ್ಣ ಬಂಕಾಪುರ, ವೀರನಗೌಡ ಲೆಕ್ಕನಗೌಡ್ರ, ಪಕ್ಕೀರಪ್ಪ ರಿತ್ತಿ ಮುಂತಾದವರು ಇದ್ದರು ಹಾಗೂ ಶಾಲಾ ವಿದ್ಯಾಥರ್ಿಗಳು, ಗುರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 