ಕುಡಿಯುವ ನೀರು ಸಂರಕ್ಷಿಸಿ: ಗ್ರಾಮ ಜಾಗೃತಿ
ಲೋಕದರ್ಶನ ವರದಿ
ಹಾವೇರಿ17: ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಹಾವೇರಿ ವತಿಯಿಂದ ಜನನಿ ಜಾನಪದ ಕಲಾ ತಂಡ ಯಕ್ಲಾಸಪುರ,ರಾಣೆಬೆನ್ನೂರು ಇವರಿಂದ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗ ಆಯೋಜಿಸಿದ್ದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಗ್ರಾಮೀಣ ಭಾಗದ ಜನರಿಗೆ ಮತ್ತು ರೈತರಿಗೆ ಕುಡಿಯುವ ನೀರನ್ನು ಮಿತವಾಗಿ ಬಳಸಿ, ನೀರು ಪೊಲಾಗದಂತೆ ಸಂರಕ್ಷಿಸಿ, ಶೌಚಾಲಯ ಬಳಸಿ, ಇಂಗು ಗುಂಡಿಗಳನ್ನು ನಿಮರ್ಿಸಿ, ಅಂತರ್ಜಲ ಮಟ್ಟವನ್ನು ಹೆಚ್ಚಿಸಿಕೊಳ್ಳಿ, ಜಮೀನಿನ ಸುತ್ತಲೂ ಸಸಿಗಳನ್ನು ನೆಡಿ ಎಂದು ಜಾಗೃತಿ ಮೂಡಿಸಲಾಯಿತು. ರೈತರು ತಮ್ಮ ಜಮೀನಿನಲ್ಲಿ ಬದುಗಳನ್ನು ಹಾಕಿಸಿ, ಮಣ್ಣಿನ ಸವಕಳಿಯನ್ನು ತಡೆಗಟ್ಟುವ ಕುರಿತು ಮಾಹಿತಿಯನ್ನು ನೀಡಿದರು. ಹಾಗೂ ವಿವಿಧ ಯೊ?ಜನೆಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಕೊನೆಯಲ್ಲಿ ರೈತ ಗೀತೆ, ಸ್ವಚ್ಛತಾ ಗೀತೆ ಹೇಳಲಾಯಿತು ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಶಿವಲಿಂಗಪ್ಪ ದಾಸಣ್ಣನವರ, ರಾಮಣ್ಣ ಬಂಕಾಪುರ, ವೀರನಗೌಡ ಲೆಕ್ಕನಗೌಡ್ರ, ಪಕ್ಕೀರಪ್ಪ ರಿತ್ತಿ ಮುಂತಾದವರು ಇದ್ದರು ಹಾಗೂ ಶಾಲಾ ವಿದ್ಯಾಥರ್ಿಗಳು, ಗುರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 