30 ಅಡಿ ಆಳದ ಬಾವಿಗೆ ಬಿದ್ದಿದ್ದ ಜಿಂಕೆಯ ರಕ್ಷಣೆ
ಉಡುಪಿ, ಮೇ 06,ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಅಸೋಡು ಗ್ರಾಮದಲ್ಲಿ ಬಾವಿಯಲ್ಲಿ ಬಿದ್ದ ಜಿಂಕೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ.ಜಿಂಕೆಯು ಆಕಸ್ಮಿಕವಾಗಿ ಮುಂಜಾನೆ 30 ಅಡಿ ಆಳದ ಬಾವಿಗೆ ಬಿದ್ದಿತ್ತು. ಇದನ್ನು ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡುತ್ತಿದ್ದಂತೆಯೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ಸ್ಥಳೀಯ ವ್ಯಕ್ತಿಯೊಬ್ಬರು ಬಾವಿಗೆ ಇಳಿದು ಜಿಂಕೆಯನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ನಂತರ ಅದನ್ನು ಹೊರತೆಗೆಯಲಾಯಿತು. ಸಂಪೂರ್ಣ ರಕ್ಷಣಾ ಕಾರ್ಯಾಚರಣೆ ಸುಮಾರು 20 ನಿಮಿಷಗಳ ಕಾಲ ನಡೆಯಿತು ಎಂದು ವಲಯಾರಣ್ಯಾಧಿಕಾರಿ (ಆರ್ಎಫ್ಒ) ಪ್ರಭಾಕರ್ ಕುಲಾಲ್ ತಿಳಿಸಿದ್ದಾರೆ. “ಮೂರು ವರ್ಷದ ಗಂಡು ಜಿಂಕೆಗೆ ಯಾವುದೇ ಗಾಯಗಳಾಗಿಲ್ಲ. ಹೊರತೆಗೆದ ನಂತರ, ಅದರ ಮೇಲೆ ನೀರನ್ನು ಸಿಂಪಡಿಸಲಾಯಿತು. ಜಿಂಕೆ ಕೂಡಲೇ ಎದ್ದು ಹತ್ತಿರದ ಕಾಡಿಗೆ ಓಡಿಹೋಯಿತು, ”ಎಂದು ಅವರು ಹೇಳಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 