ಪ್ರತಿಭಟನೆ, ಹಿಂಸಾಚಾರ : ಪ್ರಧಾನಿ ಕಳವಳ
ನವದೆಹಲಿ, ಡಿ16 ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆ ದೇಶದ ಅನೇಕ ಕಡೆ
ಹಿಂಸಾಚಾರಕ್ಕೆ ತಿರುಗಿ, ಕಾನೂನು ಕೈಗೆತ್ತಿಕೊಂಡಿರುವುದು ಬಹಳ ನೋವಿನ ಸಂಗತಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೇಂದ್ರದ ಕಾಯ್ದೆಯ ವಿರುದ್ಧದ
ಪ್ರತಿಭಟನೆ ದೆಹಲಿ ಬೆಂಗಳೂರು ಮತ್ತು ಮುಂಬೈನಲ್ಲಿ ಸೇರಿದಂತೆ ಅನೇಕ ಕಡೆ ವ್ಯಾಪಿಸಿದ್ದು, ತೀವ್ರವಾಗುತ್ತಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿಯ ಜಾಮಿಯಾ
ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಭಾನುವಾರ ಪೊಲೀಸರು ಕ್ಯಾಂಪಸ್ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿ,
ನಂತರ ಅಶ್ರುವಾಯು ಸಿಡಿಸಿದ ಘಟನೆ, ಮತ್ತು ಘರ್ಷಣೆಯಲ್ಲಿ ಕನಿಷ್ಠ 100 ಜನರು ಗಾಯಗೊಂಡಿದ್ದಾರೆ."ಪೌರತ್ವ
ತಿದ್ದುಪಡಿ ಕಾಯ್ದೆಯ ಮೇಲಿನ ಹಿಂಸಾತ್ಮಕ ಪ್ರತಿಭಟನೆ ದುರದೃಷ್ಟಕರ ಮತ್ತು ದುಃಖಕರ ಸಂಗತಿ. ಚರ್ಚೆ ಮತ್ತು ಭಿನ್ನಾಭಿಪ್ರಾಯ ಪ್ರಜಾಪ್ರಭುತ್ವದಲ್ಲಿ ಸಹಜ, ಅತ್ಯಗತ್ಯ ಭಾಗ
ಆದರೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ
ಮಾಡಿ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ, ಸಮಂಜಸವೂ
ಅಲ್ಲ ಎಂದೂ ಪ್ರಧಾನಿ
ಮೋದಿ ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 