ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಒತ್ತಾಯಿಸಿ ಪ್ರತಿಭಟನೆ
ಬೆಳಗಾವಿ : ನಗರದ ಪಿರನವಾಡಿ ನಾಕಾ ಬಳಿಯಲ್ಲಿ ಕ್ರಾಂತಿವೀರ ಸಂಗೊಳಿ ರಾಯಣ್ಣ ಪ್ರತಿಮೆವನ್ನು ಪ್ರತಿಷ್ಠಾನ ಮಾಡಬೇಕು ಎಂದು ಆಗ್ರಹಿಸಿ ರಾಯಣ್ಣ ಅಭಿಮಾನಿಗಳು ಹಾಗೂ ಕುರುಬ ಜನಾಂಗದ ನೂರಾರು ನಾಗರಿಕರು ಜಿಲ್ಲಾಡಳಿತಕ್ಕೆ ಮನವಿಯನ್ನು ಸಲ್ಲಿಸಿದರು.
ಬುಧವಾರ ದಿನದಂದು ನಗರದ ಚನ್ನಮ್ಮ ವೃತ್ತದಲ್ಲಿ ಕೆಲಹೊತ್ತು ಪ್ರತಿಭಟನೆ ನಡೆಸಿದ ನಾಗರಿಕರು ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿಯೊಂದನ್ನು ಸಲ್ಲಿಸಿ, ರಾಜ್ಯದ ಕೆಲವು ಜಿಲ್ಲೆಯಗಳಲ್ಲಿ ಈಗಾಗಲೇ ಕ್ರಾಂತಿವೀರ ರಾಯಣ್ಣ ಪ್ರತಿಮೆಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ದೇಶ ಭಕ್ತ ರಾಯಣ್ಣ ಅವರ ಪ್ರತಿಮೆಯನ್ನು ನಗರದಲ್ಲಿ ಪ್ರತಿಷ್ಠಾಪನೆ ಬಗ್ಗೆ ಪ್ರಯತ್ನ ಸಹ ಮಾಡದೆ ಇರುವದು ದರಂತವಾಗಿದೆ.
ಈ ಹಿನ್ನೆಲೆಯಲ್ಲಿ ರಾಯಣ್ಣ ಮೂತರ್ಿಯನ್ನು ಪ್ರತಿಷ್ಠಾಪಿಸಬೇಕು ಎಂದು ಕುರುಬರ ಸಮಾಜ ಒತ್ತಾಯಿಸುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗಿರುವ ಮನವಿಯಲ್ಲಿ ತಿಳಿಸಲಾಗಿದೆ.
ಇಂದಿನ ಪ್ರತಿಭಟನೆಯಲ್ಲಿ ನಾಗರಾಜ ಶಾಹಪೂರ, ಮಾಂಹಾತೇಶ ಅನಗೋಳ, ಬಸ್ಸು ಕತೆಗಾರ, ಪಕಿರಪ್ಪಾ ಹೆಗಡೆ, ಸಾಗರ ಉಮನಗಟ್ಟಿ, ಅಪ್ಪನ್ನಾ ಮುನವಳಿ ಸೇರಿದಂತೆ ರಾಯಣ್ಣ ಅಭಿಮಾನಿಗಳು ಮತ್ತು ಅನೇಕ ಕುರುಬ ಜನಾಂಗದ ನಾಗರಿಕರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 