ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನೆ: ರೈಲು ಸಂಚಾರಕ್ಕೆ ಅಡ್ಡಿ,
ಬೆಂಗಳೂರು-ಅಗರ್ತಲಾ ಎಕ್ಸ್ಪ್ರೆಸ್ ಸ್ಥಗಿತಗುವಾಹತಿ, 13- ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮುಂದುವರೆದಿರುವ ಪ್ರತಿಭಟನೆಗಳಿಂದ ಅಸ್ಸಾಂನಲ್ಲಿ ರೈಲು ಸೇವೆಗಳಿಗೆ ತೀವ್ರ ಅಡ್ಡಿಯಾಗಿದ್ದು, ಶುಕ್ರವಾರ ದೂರ ಪ್ರಯಾಣದ ಸುಮಾರು 39 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಕಳೆದ ಎರಡು ದಿನಗಳಿಂದ ಗುವಾಹತಿ-ದಿಬ್ರೂಗಢ ನಡುವಿನ ಇಂಟರ್ಸಿಟಿ ಪ್ಯಾಸೆಂಜರ್ ರೈಲುಗಳು ಮತ್ತು ಎಲ್ಲ ಸ್ಥಳೀಯ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ದೂರ ಪ್ರಯಾಣದ ಅನೇಕ ರೈಲುಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ ಎಂದು ಈಶಾನ್ಯ ಫ್ರಂಟಿಯರ್ ರೈಲ್ವೆ ವಕ್ತಾರರು ತಿಳಿಸಿದ್ದಾರೆ. ದಿಬ್ರೂಗಢ-ಹೌರಾ ಕಮರುಪ್ ಎಕ್ಸ್ಪ್ರೆಸ್, ದಿಬ್ರೂಗಢ-ಕನ್ಯಾಕುಮಾರಿ ಬಿಬೆಕ್ ಎಕ್ಸ್ಪ್ರೆಸ್, ರಾಜೇಂದ್ರನಗರ್-ನ್ಯೂ ತಿನ್ಸುಕಿಯಾ ಎಕ್ಸ್ಪ್ರೆಸ್, ಅಗರ್ತಲಾ ಸಿಯಾಲ್ಡಾ ಕಾಂಚನ್ಜುಂಗಾ ಎಕ್ಸ್ಪ್ರೆಸ್ ಮತ್ತು ಬೆಂಗಳೂರು-ಅಗರ್ತಲಾ ಹಮ್ಸಫರ್ ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಆದರೆ, 14020 ತ್ರಿಪುರ್ಸುಂದರಿ ಎಕ್ಸ್ಪ್ರೆಸ್ ರೈಲು ಬರ್ದಾಪುರ್ ದಿಂದ ಅಗರ್ತಲಾ ನಡುವೆ ಪ್ಯಾಸೆಂಜರ್ ರೈಲು ಆಗಿ ಸಂಚರಿಸುತ್ತದೆ. ಸಿಲ್ಚಾರ್-ಅಗರ್ತಲಾ ಪ್ಯಾಸೆಂಜರ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 