ಕೇಂದ್ರ ಸರ್ಕಾರದ ಕಾರ್ಮಿಕ ಸಂಹಿತೆಗಳ ವಿರುದ್ಧ ಪ್ರತಿಭಟನೆ
Protest against the central government's labor codes
ಲೋಕದರ್ಶನ ವರದಿ
ದಾಂಡೇಲಿ 12: ಜೆ.ಸಿ.ಟಿ.ಯೂ ಸಂಯುಕ್ತ ಹೋರಾಟ -ಕರ್ನಾಟಕ ಕರೆಯ ಮೇರೆಗೆ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಗುರುವಾರ ದಾಂಡೇಲಿಯ ಸೋಮಾನಿ ಸರ್ಕಲ್ ಬಳಿ ಕಾರ್ಮಿಕ, ನೌಕರರು ಮತ್ತು ಕೂಲಿ ಕಾರ್ಮಿಕರು ಸೇರಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ದ ವಿವಿಧ ಸಂಘಟನೆಗಳು ಸೇರಿ ನೀಡಿದ ಮುಷ್ಕರದ ಕರೆಗೆ ಬೆಂಬಲ ವ್ಯಕ್ತಪಡಿಸಿದರು.
ವಿಬಿ ಗ್ರಾಮ ಜಿ ಕಾಯ್ದೆ, ವಿದ್ಯುತ್ ಶಕ್ತಿ ತಿದ್ದುಪಡಿ ಮಸೂದೆ, ವಿಮಾ ಮಸೂದೆ, ಬೀಜ ಮಸೂದೆ ನೀತಿಗಳು ಜನವಿರೋಧಿ ಎಂದು ಪ್ರತಿಭಟನಾಕಾರರು ಹೇಳಿದರು. ಇದರೊಂದಿಗೆ ಸ್ಕೀಮ್ ನೌಕರರನ್ನು ಖಾಯಂ ಮಾಡಬೇಕು, ಕನಿಷ್ಠ ವೇತನ ಜಾರಿಯಾಗಬೇಕು, ಅರಣ್ಯ ಭೂಮಿ ಹಕ್ಕು ಸಿಗಬೇಕು, ದೇಶವಿರೋದಿ ಕಾರ್ಮಿಕರ ಸಂಹಿತೆಗಳು ರದ್ದಾಗಬೇಕು. ನರೇಗಾ ಯೋಜನೆ ಮತ್ತೆ ಸ್ಥಾಪನೆಯಾಗಬೇಕು ಎನ್ನುವ ಒತ್ತಾಯ ಕೇಳಿ ಬಂತು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸಲ್ಲಿಂ ಸಯ್ಯದ್, ಡಿ. ಸ್ಯಾಮಸನ್, ವಿಜಯಕುಮಾರ, ಇಲಿಯಾಸ್ ಖಾನ್, ಸೇವಂತಿ ಸೇರಿದಂತೆ ಸಿಐಟಿಯು ಸಂಯೋಜಿತ ಎಲ್ಲ ಸಂಘಟನೆಯ ಮುಖಂಡರು ಮತ್ತು ಸದಸ್ಯರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 