ಭಾಜಪ ರೈತ ಮೋರ್ಚಾದಿಂದ ಪ್ರತಿಭಟನೆ

ಭಾಜಪ ರೈತ ಮೋರ್ಚಾದಿಂದ ಪ್ರತಿಭಟನೆ Protest by BJP Farmers' Morcha

ಶಿಗ್ಗಾವಿ 28 : ಹಾವೇರಿ ಜಿಲ್ಲೆಯಲ್ಲಿ ಉಂಟಾದ ರಾಸಾಯನಿಕ ಗೊಬ್ಬರದ ಅಭಾವವನ್ನು ಖಂಡಿಸಿ ಹಾಗೂ ಬೆಳೆ ನಾಶದ ಕುರಿತು ಮಧ್ಯಂತರ ಪರಿಹಾರ ನೀಡದ ರಾಜ್ಯ ಕಾಂಗ್ರೆಸ್ ಸರಕಾರದ ಧೋರಣೆ ಖಂಡಿಸಿ ಮಂಗಳವಾರ ಜುಲೈ 29 ರ ಬೆಳಿಗ್ಗೆ 11 ಗಂಟೆಗೆ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಬಿಜೆಪಿ ರೈತ ಮೋರ್ಚಾದ ವತಿಯಿಂದ ಜಿಲ್ಲಾದ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕಾರಣ ತಾಲೂಕಿನ ರೈತ ಮೋರ್ಚಾದ ಸರ್ವ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಯಶಸ್ವಿಗೋಳಿಸಲು ಮಂಡಳ ಅಧ್ಯಕ್ಷ ವಿಶ್ವನಾಥ್ ಹರವಿ ಕೋರಿದ್ದಾರೆ.