ಖಾನಾಪುರ ತಾಲೂಕ ತಹಶೀಲ್ದಾರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ
Protest by besieging the Khanapur Taluk Tahsildar's office
ಖಾನಾಪುರ 01 : ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕ ಸಂಘಟನೆಯಿಂದ ಖಾನಾಪುರ ತಾಲೂಕ ತಹಶೀಲ್ದಾರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಯಿತು. ನೆರಸಿ ಗ್ರಾಮಕ್ಕೆ ನೀಡಿದ ಹಿಡಿಕಲ್ ಡ್ಯಾಮ್ 4 ಎಕರೆ ಭೂಮಿಯಲ್ಲಿ ಸ್ಮಶಾನಕ್ಕೆ ಹಾಗೂ ಇನ್ನಿತರ ಗ್ರಾಮದ ಜನರ ಅನುಕೂಲಕ್ಕೆ ನೀಡಿದ್ದು. ಆ ಗ್ರಾಮದ ಒಂದು ಕುಟುಂಬ ಆ ಜಮೀನಿನಲ್ಲಿ ಒತ್ತುವರಿಯಾಗಿ ಸಾಗುವಳಿ ಮಾಡುತ್ತಿದ್ದು ಈ ವಿಚಾರವಾಗಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಬೇಜವಾಬ್ದಾರಿ ವಹಿಸಿದ ಖಾನಾಪುರ ತಹಶೀಲ್ದಾರ ಕಚೇರಿ ವಿರುದ್ಧ ರಾಜ್ಯಾದ್ಯಕ್ಷರಾದ ಮಹೇಶ್ ಶೀಗಿಹಳ್ಳಿ ರವರ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಸ್ಥಳಕ್ಕೆ ದವಡಾಯಿಸಿದ ತಹಶೀಲ್ದಾರ ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಜರುಗಿಸುತ್ತೇನೆ ಎಂದು ತಿಳಿಸಿದರು. ಈ ಸಂದರ್ಬದಲ್ಲಿ (ಖಾನಾಪುರ ತಾಲೂಕಿನ ಅದ್ಯಕ್ಷರಾದ ಆನಂದ ಊದಿ )(ತಾಲೂಕು ಗೌರವ ಅಧ್ಯಕ್ಷ ರಾಜು ನಾಯಕ ) (ಬೆಳಗಾವಿ ಗ್ರಾಮೀಣ ಅಧ್ಯಕ್ಷ ಲಕ್ಷ್ಮಣ ಬಾಗಡಿ)(ಬೆಳಗಾವಿ ಜಿಲ್ಲಾ ಗೌರವ ಅಧ್ಯಕ್ಷ ರಾಮ್ ಪೂಜಾರಿ ) (ರುದ್ರ್ಪ ಮುಖಾರಿ ಖಾನಾಪುರ ನಗರ ಅದ್ಯಕ್ಷರು)(ಸುನೀಲ ಬಾಳನ್ನವರ ಖಾನಾಪುರ ನಗರ ಉಪಾದ್ಯಕ್ಷ )(ಕಾರ್ಯದರ್ಶಿ ಹನಮಂತ ನಾಯಕ)(ಶುಭಂ ತಳವಾರ)(ಆಕಾಶ್ ಸರಿಕಾರ)(ರೋಹಿತ್ ಅರಳಗುಂದಿ ಹಾಗೂ ಇನ್ನು ಉಳಿದ ಪದಾದಿಕಾರಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 