ಕಾಲುವೆಗೆ ನೀರು ಹರಿಸದ ಕಾರಣ ಅಡ್ಡಲಾಗಿ ಮಲಗಿ ಪ್ರತಿಭಟನೆ
Protest by lying cross-legged because water was not being pumped into the canal
ಮಾಂಜರಿ 16 : ಚಿಕ್ಕೋಡಿ ತಾಲ್ಲೂಕಿನ ಡೊಣವಾಡ ಗ್ರಾಮದ ಮಹಾಂತ ನಗರ ಸೇರಿ ವಿವಿಧ ತೋಟದ ವಸತಿ ಪ್ರದೇಶದ ಜನರು ಶುಕ್ರವಾರ ನೀರಾವರಿ ಕಾಲುವೆಯಲ್ಲೇ ಅಡ್ಡಲಾಗಿ ಮಲಗಿ, ಪ್ರತಿಭಟನೆ ಮಾಡಿದರು. ’ಕೊಟಬಾಗಿ ಏತ ನೀರಾವರಿಯ ಕಾಲುವೆಗೆ ನೀರು ಹರಿಸದ ಕಾರಣ ಪ್ರತಿ ವರ್ಷ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗುತ್ತದೆ. ಕೊನೆಯ ಭಾಗದವರೆಗೆ ನೀರು ಹರಿಸಿ’ ಎಂದು ಆಗ್ರಹಿಸಿದರು.
ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ನಿರ್ವಹಣೆ ಆಗುವ 17 ಕಿ.ಮೀ ಉದ್ದದ ಕಾಲುವೆಯಲ್ಲಿ 178.62 ಕ್ಯೂಸೆಕ್ ನೀರು ಹರಿಯಬೇಕಿತ್ತು ಎಂದು ಪ್ರತಿಪಾದಿಸಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಹೂಳು ತೆರವು ಕಾಲುವೆಯ ಮಾಡಲಾಗಿದೆ. ಆದರೆ, ಅಧಿಕಾರಿಗಳು ನೀರು ಬಿಡುಗಡೆಗೆ ಮೀನ-ಮೇಷತೋರುತ್ತಿದ್ದಾರೆ’ ಎಂದು ರೈತ ಮುಖಂಡ ರಾಚಪ್ಪ ಶಿವಾಪೂರೆ ಆರೋಪಿಸಿದರು.
’ಕೆಲವೆಡೆ ಕಾಲುವೆ ನೀರನ್ನು ಹಳ್ಳಕ್ಕೆ ಬಿಡಲಾಗುತ್ತಿದೆ. ಕಾಲುವೆ ಕೊನೆವರೆಗೆ ನೀರು ಹರಿಯುತ್ತಿಲ್ಲ. ರೈತರು ನೀರಿಲ್ಲದೆಬೆಳೆಯನ್ನು ಉಳಿಸಿಕೊಳ್ಳುವುದು ಹೇಗೆ ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ತೊಂದರೆ ಅನುಭವಿಸುವಂತಾಗಿದೆ’ ಎಂದು ರೈತ ಬಾಬುಮಗದುಮ್ಮ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 