ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಖಾನೆಗಳ ವಿಸ್ತರಣೆಯ ದ್ವಂದ್ವ ಹೇಳಿಕೆ ಖಂಡಿಸಿ ಪ್ರತಿಭಟನೆ
Protest condemns Chief Minister Siddaramaiah's double-edged statement on factory expansion
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಖಾನೆಗಳ ವಿಸ್ತರಣೆಯ ದ್ವಂದ್ವ ಹೇಳಿಕೆ ಖಂಡಿಸಿ ಪ್ರತಿಭಟನೆ
ಕೊಪ್ಪಳ 13 : ಅಶೋಕ ವೃತ್ತದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಖಾನೆಗಳ ವಿಸ್ತರಣೆಯ ಕುರಿತು ನೀಡಿದ ದ್ವಂದ್ವ ಹೇಳಿಕೆಗಳನ್ನು ಖಂಡಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆಯಿಂದ ನಗರದ ಅಶೋಕ ವೃತ್ತದಲ್ಲಿ ಸೆಪ್ಟೆಂಬರ್ 13 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ವೇದಿಕೆಯಿಂದ ಸೆಪ್ಟೆಂಬರ್ 12 ರಂದು ಶುಕ್ರವಾರ ರಾತ್ರಿ ನಡೆದ ಪೂರ್ವ ಭಾವಿ ಸಭೆಯ ಚರ್ಚೆಯಲ್ಲಿ ಜಪಾನ್ ದೇಶದ ಸುಮಿಟಾವೊ ಕಂಪನಿ ಜೊತೆಗೆ ಕರ್ನಾಟಕ ಸರ್ಕಾರ ಗಿಣಿಗೇರಿ - ಕನಕಾಪುರದಲ್ಲಿ ಮುಕುಂದ - ಸುಮಿ ಉಕ್ಕಿನ ಘಟಕ ಸ್ಥಾಪನೆ (ವಿಸ್ತರಣೆ) ಮಾಡಲು ಒಪ್ಪಂದ ಮಾಡಿಕೊಂಡಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಇವರು ಹೇಳಿದ್ದಾರೆ. ಇದನ್ನು ಖಂಡಿಸಿ ಪ್ರತಿಭಟನೆಯನ್ನು ಜಂಟಿ ಕ್ರಿಯಾ ವೇದಿಕೆಯಿಂದ ನಡೆಸಲು ನಿರ್ಧರಿಸಲಾಗಿದೆ. ಕಾರ್ಖಾನೆಗಳ ವಿಸ್ತರಣೆಯಿಂದ ಉಂಟಾಗುವ ಮಾಲಿನ್ಯ ಜೀವರಾಶಿಗಳ ಮೇಲೆ ಆಗಲಿರುವ ದುಷ್ಪರಿಣಾಮಗಳಿಂದ ರಕ್ಷಣೆಗಾಗಿ ಪ್ರತಿಯೊಬ್ಬ ಒಡನಾಡಿ ಹೋರಾಟಗಾರರು, ಪ್ರಗತಿಪರ,ಪರಿಸರ,ಜೀವಪರ ಕಾಳಜಿ ಉಳ್ಳವರು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಕೋರಲಾಗಿದೆ. ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯ ಪ್ರಧಾನ ಸಂಚಾಲಕರಾದ ಬಂಡಾಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು ವಹಿಸಿದ್ದರು. ಮುಖಂಡರಾದ ಬಸವರಾಜ್ ಶೀಲವಂತರ್. ಮಹಾಂತೇಶ ಕೋತಬಾಳ, ಡಿ.ಹೆಚ್. ಪೂಜಾರ. ಎಸ್.ಎ.ಗಫಾರ್, ಚನ್ನಬಸಪ್ಪ ಅಪ್ಪಣವರ್, ಕೆ.ಬಿ. ಗೋನಾಳ, ಮುದುಕಪ್ಪ ಹೊಸಮನಿ, ಮಂಜುನಾಥ ಗೊಂಡಬಾಳ,ರವಿ ಕಾಂತನವರ್,ಹಂಚಾಳಪ್ಪ ಇಟಗಿ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 