ಕಬ್ಬಿನ ದರ ನಿಗದಿ ಮಾಡಲು ಒತ್ತಾಯಿಸಿ ಪ್ರತಿಭಟನೆ
Protest demanding fixing of sugarcane prices
ಜಮಖಂಡಿ 04: ತಾಲ್ಲೂಕಿನ ಸಿದ್ದಾಪೂರ ಗ್ರಾಮದ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆಗಳು ಕೂಡಲೇ 3500 ಕಬ್ಬಿನ ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ. ಸಕ್ಕರೆ ಕಾರ್ಖಾನೆ ಆವರಣದಲ್ಲಿ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘಟನೆಯ ಪ್ರತಿಭಟನೆಯಲ್ಲಿ ಮೂರು ಕಾರಿನ ವಾಹನದ ಗಾಜನ್ನು ಪುಡ್ಡಿ-ಪುಡ್ಡಿ ಮಾಡಿದ ಘಟನೆ ನಡೆದಿದೆ.
ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ ಮಾತನಾಡಿ, ಪ್ರಸಕ್ತಸಾಲಿನ 3500 ದರ ನಿಗದಿ ಮಾಡಿ ಕಾರ್ಖಾನೆ ಪ್ರಾರಂಭ ಮಾಡಬೇಕು, 2021-22ನೇ ಸಾಲಿನ ಟನ್ ಕಬ್ಬಿಗೆ 62 ರೂ ಬಾಕಿ, 2023-24ನೇ ಸಾಲಿನ 114 ರೂ ಕಬ್ಬು ಕಟಾವುದಾರರ ಬಿಲ್, 2024-25ನೇ ಸಾಲಿನ 2ನೇ ಕಂತಿನ ಹಣ 200ರೂಗಳನ್ನು ಕೂಡಲೇ ಪಾವತಿ ಮಾಡಬೇಕು ಎಂದರು.
ಮುಖಂಡ ಮುತ್ತಪ್ಪ ಕೋಮಾರ ಮಾತನಾಡಿ, ಸಕ್ಕರೆ ಕಾರ್ಖಾನೆ ಮಾಲಿಕರು ಹಾಗೂ ಸರ್ಕಾರ ಕೂಡಿಕೊಂಡು ರೈತರ ಸಹನೆ ಪರೀಕ್ಷೆ ಮಾಡುತ್ತಿದೆ, ಕೂಡಲೇ ಅದನ್ನು ನಿಲ್ಲಿಸಿ ರೈತರ ಹಿತವನ್ನು ಕಾಪಾಡಬೇಕು, ಕಳೆದ ಒಂದು ವಾರದಿಂದ ರಾಜ್ಯದ ಹಲವು ಕಡೆಗಳಲ್ಲಿ ಪ್ರತಿಭಟನೆ ನಡೆದರು ಸರ್ಕಾರದ ಸಚಿವರು, ಮುಖ್ಯಮಂತ್ರಿಗಳು ಬಾಯಿ ಬಿಚ್ಚಿ ಮಾತನಾಡುತ್ತಿಲ್ಲ, ಕಾರ್ಖಾನೆಗಳ ಎಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅಕ್ರೋಶ ವ್ಯಕ್ತಪಡಿಸಿದರು.
ರೈತ ಮುಖಂಡರಾದ ಈರ್ಪ ಹಂಚಿನಾಳ, ಹಣಮಂತಗೌಡ ಸೋರಗಾಂವಿ, ಹಣಮಂತ ನಬಾಬ, ನಾಗಪ್ಪ ಪೂಜಾರಿ ಸೇರಿದಂತೆ ಇತರರು ಇದ್ದರು.
ಪ್ರತಿಭಟಣೆ ಮಾಡಲು ನಮ್ಮದು ಯಾವುದೇ ತೊಂದರೆ ಇಲ್ಲ, ಪ್ರತಿಭಟನೆ ವೇಳೆ ಮೂರು ಕಾರಿನ ವಾಹನದ ಗಾಜನ್ನು ಕಲ್ಲಿನಿಂದ ಒಗೆದು ಒಡೆದಿದ್ದಾರೆ, ಕಳೆದ ವರ್ಷ ಟ್ರ್ಯಾಕ್ಟಗೆ ಬೆಂಕಿ ಹಚ್ಚಿ ನಷ್ಟವನ್ನು ಮಾಡಿದ್ದರು ಕೆಲವರು ಉದ್ದೇಶಪೂರ್ವಕವಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಕಾರ್ಖಾನೆ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 