ಪಂಚಾಯತ್ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
Protest demanding fulfillment of demands of Panchayat employees
ಹೂವಿನಹಡಗಲಿ 25: ಗ್ರಾಮ ಪಂಚಾಯಿತಿಯ ನೌಕರರ ಸಮಸ್ಯೆಗಳ ಬಗ್ಗೆ ಶಾಸಕ ಕೃಷ್ಣನಾಯಕ ಚಳಿಗಾಲ ಅಧಿವೇಶನದಲ್ಲಿ ಮಾತನಾಡಲು ಶಾಸಕರ ಆಪ್ತ ಸಹಾಯಕ ಪಿ.ಮಲ್ಲಣ್ಣ ಅವರಿಗೆ ಗ್ರಾಪಂ ನೌಕರರಿಂದ ಶಾಸಕರ ನಿವಾಸದಲ್ಲಿ ಮನವಿ ಸಲ್ಲಿಸಲಾಯಿತು.
ಬಿಲ್ ಕಲೆಕ್ಟರ್ ನಾಗಭೂಷಣ ರೆಡ್ಡಿಮಾತನಾಡಿ, ಗ್ರಾಮ ಪಂಚಾಯತಿ ನೌಕರರ ಪ್ರಮುಖ ಬೇಡಿಕೆಗಳಿಗಾಗಿ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಚರ್ಚಿಸುವ ಕುರಿತು ರಾಜ್ಯದಲ್ಲಿ ಸುಮಾರು 63 ಸಾವಿರಗ್ರಾಮಪಂಚಾಯತನೌಕರರು, ಕರ ವಸೂಲಿಗಾರರಾಗಿ, ಕ್ಲರ್ಕ ಕಂ ಡಾಟಾ ಎಂಟ್ರಿ ಅಪರೇಟರಗಳಾಗಿ, ಸ್ವಚ್ಛತಾಗಾರರು, ಸಿಪಾಯಿ ಮತ್ತು ವಾಟರಮನ್ಗಳಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕೊಟ್ಟಷ್ಟು ವೇತನಕ್ಕೆ ದುಡಿಯುತ್ತಿದ್ದ ಪಂಚಾಯತಿ ನೌಕರರಿಗೆ ಇಡೀ ರಾಜ್ಯದಲ್ಲಿ ಸಂಘಟಿಸಿ ನಿರಂತರ ಹೋರಾಟಮಾಡಿದ್ದರ ಫಲವಾಗಿ ಪಂಚಾಯತ ನೌಕರರನ್ನು ಕನಿಷ್ಠ ವೇತನ ಕಾಯ್ದೆಯಲ್ಲಿ ಸೇರಿಸಲಾಗಿದೆ. ಆದರೆ ಅವರಿಗೆ ಬದುಕಿ ಉಳಿಯುಷ್ಟು ವೇತನ ಮಾತ್ರ ಸಿಗುತ್ತಿಲ್ಲ ಮತ್ತು ಪಂಚಾಯತ್ ಮಟ್ಟದಲ್ಲಿ ಸ್ವಚ್ಚವಾಹಿನಿ ನೌಕರರು ಎಂದು ಸರ್ಕಾರ ತರಬೇತಿ ನೀಡಿ ಸಂಜೀವಿನಿ ಒಕ್ಕೂಟದಿಂದ ನೇಮಕಾತಿ ಮಾಡಿಕೊಂಡು ಗುತ್ತಿಗೆ ಆಧಾರದಲ್ಲಿ ಗುಲಾಮರಂತೆ ದುಡಿಸಿಕೊಳ್ಳುತ್ತಿದ್ದಾರೆ. ಸರ್ಕಾರ ಅವರಿಗೆ ಪಂಚಾಯತ್ ನೌಕರರು ಎಂದು ಪರಿಗಣಿಸಬೇಕು ಮತ್ತು ಒಂದು ನಿಗದಿತ ವೇತನ ನೀಡಬೇಕು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವ ಕುರಿತು ಶಾಸಕರು ಸದನದಲ್ಲಿ ಚರ್ಚಿಸಬೇಕು ಎಂದು ಒತ್ತಾಯಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 