ಮದ್ಯದ ಅಂಗಡಿ ಬಂದ್ಗೆ ಆಗ್ರಹಿಸಿ ಪ್ರತಿಭಟನೆ
ಧಾರವಾಡ 03: ವಾರ್ಡ ನಂ 13 ರಲ್ಲಿರುವ ಶ್ರೀನಗರ ವೃತ್ತದಲ್ಲಿ ಹೊಸದಾಗಿ ಇಂದು ಮೆ. ದುರ್ಗ ಪೆಗ್ಗ್ ಬಾರ್ ಮತ್ತು ರೆಸ್ಟೊರೆಂಟ್ ಆರಂಭಗೊಂಡಿದ್ದು ಸ್ಥಳೀಯರ ಹಾಗೂ ಅಕ್ಕಪಕ್ಕದ ಮನೆಯವರ ಒಪ್ಪಿಗೆ ಇಲ್ಲದೆ ನಿನ್ನೆಯವರೆಗೂ ಅಮೃತಸಾಗರ ಹೋಟೆಲ ನಾಮಫಲಕವಿದ್ದು ಇಂದು ಮುಂಜಾನೆ ಏಕಾಏಕಿ ಮೆ|| ದುರ್ಗ ಪೆಗ್ಗ್ ಬಾರ್ ಮತ್ತು ರೆಸ್ಟೊರೆಂಟ್ ನಾಮಫಲಕವನ್ನು ಹಾಕಿ ಮದ್ಯದ ಅಂಗಡಿಯನ್ನು ಆರಂಭಿಸಿದ್ದಾರೆ. ಈ ಅಂಗಡಿಗೆ ವಿರೋಧಿಸಿ ದಿ.29ರಂದು ಜಿಲ್ಲಾಧಿಕಾರಿಗಳಿಗೆ ಹಾಗೂ ಸಹಾಯಕ ಆಯುಕ್ತರು ಅಬಕಾರಿ ಇಲಾಖೆ ಮದ್ಯದ ಅಂಗಡಿಗೆ ಪರವಾಣಿಗೆಯನ್ನು ಕೊಡಬಾರದೆಂದು ಮನವಿ ಸಲ್ಲಿಸಲಾಗಿದೆ. ಆದರೂ ಸಹ ಇಂದು ಮದ್ಯ ,ಮಾರಾಟದ ಅಂಗಡಿಯನ್ನು ಆರಂಭಮಾಡಿದ್ದಾರೆ. ಆದ್ದರಿಂದ ಇವತ್ತು ಸ್ಥಳೀಯ ನಾಗರಿಕರಿಂದ ಅಂಗಡಿಯನ್ನು ಬಂದ್ ಮಾಡುವಂತೆ ಅಂಗಡಿಯ ಮುಂದೆ ಪ್ರತಿಭಟನೆಯ ಮೂಲಕ ವಿರೋಧ ವ್ಯಕ್ತಪಡಿಸಲಾಯಿತು.
ಜಯ ಕರ್ನಾಟಕ ಸಂಘಟನೆಯ ರಾಜ್ಯ ಜಂಟಿ ಕಾರ್ಯದರ್ಶಿ ಮುತ್ತು ಬೆಳ್ಳಕ್ಕಿ, ಹುಧಾಮಸ ಮಾಜಿ ಪಾಲಿಕೆ ಸದಸ್ಯ್ಯರಾದ ಬಲರಾಮ ಕುಸುಗಲ್ಲ ಕಮಲುಪುಲವಾಲೆ ಸಂತೋಜಿ ಅವ್ವನವರ ಕೃಷ್ಣಾ ಹುಬ್ಬಳ್ಳಿ ರಾಧಾ ಪಾಟೀಲ ಇನ್ನೂ ಅನೇಕ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ 