ಹೊರ ರಾಜ್ಯಗಳ ವಲಸೆ ಕಾರ್ಮಿಕರಿಂದ ಪ್ರತಿಭಟನೆ
ಬೆಂಗಳೂರು, ಮೇ 12, ಬೇರೆ ಬೇರೆ ರಾಜ್ಯದಿಂದ ಬೆಂಗಳೂರಿಗೆ ಬಂದಿದ್ದ ವಲಸೆ ಕಾರ್ಮಿಕರು ತಮ್ಮ ಊರಿಗೆ ವಾಪಸ್ಸು ಕಳುಹಿಸುವಂತೆ ಒತ್ತಾಯಿಸಿ ಸುಮಧುರಾ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.ತಮ್ಮ ರಾಜ್ಯಕ್ಕೆ ತೆರಳಲು ಅವಕಾಶ ನೀಡದ ಕಟ್ಟಡ ಮಾಲೀಕರ ವಿರುದ್ಧ ವಲಸೆ ಕಾರ್ಮಿಕರು ಆಕ್ರೋಶ ವ್ಯಕ್ತಡಿಸಿ ಪ್ರತಿಭಟಿಸುತ್ತಿದ್ದಾರೆ.ಪಶ್ಚಿಮ ಬಂಗಾಳ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳ ವಲಸೆ ಕಾರ್ಮಿಕರನ್ನು ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಬನಹಳ್ಳಿ ಬಳಿ ಕೂಡಿ ಹಾಕಲಾಗಿದ್ದು, ಸೋಮವಾರ ರಾತ್ರಿಯಿಂದ ನಿರಂತರವಾಗಿ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಊಟ, ನೀರು ಇಲ್ಲ, ಕೂಲಿಯೂ ಇಲ್ಲದೆ ಪರದಾಡುತ್ತಿರುವ ಕಾರ್ಮಿಕರು, ನಮ್ಮ ರಾಜ್ಯಕ್ಕೆ ನಮ್ಮನ್ನು ವಾಪಸ್ಸು ಕಳುಹಿಸಿ ಕೊಡಿ ಎಂದು ಕಾಡುಗೋಡಿ ಪೊಲೀಸರನ್ನು ಅಂಗಲಾಚಿದ ಬೇಡಿಕೊಳ್ಳುತ್ತಿದ್ದಾರೆ.ಸುಮಾರು 300 ಜನ ಕಾರ್ಮಿಕರನ್ನು ಇಲ್ಲಿ ಕೂಡಿ ಹಾಕಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಆಗಮಿಸುವಂತೆ ಅವರು ಆಗ್ರಹಿಸಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 