ಬಸ್ ನಿಲುಗಡೆಗೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಲೋಕದರ್ಶನವರದಿ
ರಬಕವಿ-ಬನಹಟ್ಟಿ೧೧ : ಹೊಸೂರ ಗ್ರಾಮದಲ್ಲಿ ಬಸ್ ನಿಲುಗಡೆಗೆ ಆಗ್ರಹಿಸಿ ವಿದ್ಯಾಥರ್ಿಗಳು ಹಾಗೂ ಸಾರ್ವಜನಿಕರು ಮಂಗಳವಾರ ಗ್ರಾಮದ ರಸ್ತೆ ಬಂದ್ ಮಾಡಿ, ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳು ನಿತ್ಯ ತೇರದಾಳ, ಜಮಖಂಡಿ, ಮಹಾಲಿಂಗಪುರದ ಶಾಲಾ ಕಾಲೇಜುಗಳಿಗೆ ಹೋಗುತ್ತಾರೆ.
ಸಾರ್ವಜನಿಕರು ಕೂಡ ವಿವಿಧ ಕೆಲಸಗಳಿಗೆ ಹೋಗಿ ಬರುತ್ತಾರೆ. ಆದರೆ, ಗ್ರಾಮದಲ್ಲಿ ಬಸ್ ನಿಲುಗಡೆಯಿಲ್ಲ. ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಬಸ್ಗಾಗಿ ಒಂದು ಕಿ.ಮೀ ದೂರದಲ್ಲಿರುವ ರಬಕವಿ ಮತ್ತು ಒಂದುವರೆ ಕಿ.ಮೀ ದೂರದಲ್ಲಿರುವ ಬನಹಟ್ಟಿಗೆ ಹೋಗಬೇಕಾಗಿದೆ. ಇದರಿಂದ ಸಾಕಷ್ಟು ತೊಂದರೆಯಾಗಿದೆ ಎಂದು ವಿದ್ಯಾರ್ಥಿ ಮುಖಂಡ ಶಿವಾನಂದ ಕೊಣ್ಣೂರ ಅಳಲು ತೋಡಿಕೊಂಡರು.
ಬನಹಟ್ಟಿಯ ಕೆಎಸ್ಆರ್ಟಿಸಿ ಅಧಿಕಾರಿ ದೇವೇಂದ್ರ ಪತ್ತಾರ ಅವರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು.
ಬಸ್ ನಿಲುಗಡೆ ಸಂಬಂಧ ಮೇಲಧಿಕಾರಿಗಳ ಜತೆ ಚಚರ್ಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು. ಆ ಬಳಿಕ ಪ್ರತಿಭಟನೆ ಹಿಂಪಡೆದರು. ಕಾಡಪ್ಪ ಇಂಗಳಗಾವಿ, ಮಂಜು ಡವಳಗಿ, ಮಲ್ಲಪ್ಪ ನಾವಿ, ಸಾಗರ ಜಗದಾಳ, ವಿನಾಯಕ ಕಾಂತಿ, ಬಸವರಾಜ ಬುಗಟಿ, ಸಂತೋಷ ಇಂಗಳಗಾವಿ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 