ಉದಾರವಾದಿ ತಂದೆಯ ಮಗನಾಗಿರುವುದಕ್ಕೆ ಹೆಮ್ಮೆ : ರಾಹುಲ್
ನವದೆಹಲಿ, ಮೇ 21, ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯತಿಥಿ ಅಂಗವಾಗಿ ಅವರ ಪುತ್ರ ಹಾಗೂ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ತಂದೆಗೆ ಗೌರವ ಶ್ರದ್ದಾಂಜಲಿ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ನಿಜವಾದ ದೇಶಭಕ್ತ, ಉದಾರವಾದಿ ಮತ್ತು ಲೋಕೋಪಕಾರಿ ತಂದೆಯ ಮಗನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಸಂತೋಷವಿದೆ.
ಪ್ರಧಾನ ಮಂತ್ರಿಯಾಗಿ ರಾಜೀವ್ ಗಾಂಧಿ ದೇಶವನ್ನು ಪ್ರಗತಿಯ ಹಾದಿಯಲ್ಲಿ ಮುನ್ನಡೆಸಿದ್ದಾರೆ. ರಾಷ್ಟ್ರವನ್ನು ಸಬಲೀಕರಣಗೊಳಿಸಲು ಅವರು ಅನೇಕ ಅಗತ್ಯ, ಪೂರಕ ಕ್ರಮ ಕೈಗೊಂಡಿದ್ದಾರೆ. ಪುಣ್ಯ ತಿಥಿಯಂದು ಅವರಿಗೆ ಪ್ರೀತಿ ಮತ್ತು ಕೃತಜ್ಞತೆಯಿಂದ ವಂದಿಸುತ್ತೇನೆ ಎಂದು ರಾಹುಲ್ ಬರೆದುಕೊಂಡಿದ್ದಾರೆ.ರಾಜೀವ್ ಗಾಂಧಿ ಅವರು 1991 ರ ಮೇ. 21 ರಂದು ಚುನಾವಣಾ ಪ್ರಚಾರಕ್ಕಾಗಿ ತಮಿಳುನಾಡಿನ ಶ್ರೀಪೆರಂಬುದೂರ್ ಗೆ ಬಂದಿದ್ದ ಸಮಯದಲ್ಲಿ ಎಲ್ ಟಿಟಿಇ ಮಾನವ ಬಾಂಬ್ ದಾಳಿಗೆ ಮಾಜಿ ಪ್ರಧಾನಿ ಬಲಿಯಾಗಿದ್ದರು. ರಾಜೀವ್ ಗಾಂಧಿ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರೆ ಅನೇಕ ನಾಯಕರು ಅವರಿಗೆ ಗೌರವ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 