ಉದಾರವಾದಿ ತಂದೆಯ ಮಗನಾಗಿರುವುದಕ್ಕೆ ಹೆಮ್ಮೆ : ರಾಹುಲ್
ನವದೆಹಲಿ, ಮೇ 21, ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯತಿಥಿ ಅಂಗವಾಗಿ ಅವರ ಪುತ್ರ ಹಾಗೂ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ತಂದೆಗೆ ಗೌರವ ಶ್ರದ್ದಾಂಜಲಿ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ನಿಜವಾದ ದೇಶಭಕ್ತ, ಉದಾರವಾದಿ ಮತ್ತು ಲೋಕೋಪಕಾರಿ ತಂದೆಯ ಮಗನಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಸಂತೋಷವಿದೆ.
ಪ್ರಧಾನ ಮಂತ್ರಿಯಾಗಿ ರಾಜೀವ್ ಗಾಂಧಿ ದೇಶವನ್ನು ಪ್ರಗತಿಯ ಹಾದಿಯಲ್ಲಿ ಮುನ್ನಡೆಸಿದ್ದಾರೆ. ರಾಷ್ಟ್ರವನ್ನು ಸಬಲೀಕರಣಗೊಳಿಸಲು ಅವರು ಅನೇಕ ಅಗತ್ಯ, ಪೂರಕ ಕ್ರಮ ಕೈಗೊಂಡಿದ್ದಾರೆ. ಪುಣ್ಯ ತಿಥಿಯಂದು ಅವರಿಗೆ ಪ್ರೀತಿ ಮತ್ತು ಕೃತಜ್ಞತೆಯಿಂದ ವಂದಿಸುತ್ತೇನೆ ಎಂದು ರಾಹುಲ್ ಬರೆದುಕೊಂಡಿದ್ದಾರೆ.ರಾಜೀವ್ ಗಾಂಧಿ ಅವರು 1991 ರ ಮೇ. 21 ರಂದು ಚುನಾವಣಾ ಪ್ರಚಾರಕ್ಕಾಗಿ ತಮಿಳುನಾಡಿನ ಶ್ರೀಪೆರಂಬುದೂರ್ ಗೆ ಬಂದಿದ್ದ ಸಮಯದಲ್ಲಿ ಎಲ್ ಟಿಟಿಇ ಮಾನವ ಬಾಂಬ್ ದಾಳಿಗೆ ಮಾಜಿ ಪ್ರಧಾನಿ ಬಲಿಯಾಗಿದ್ದರು. ರಾಜೀವ್ ಗಾಂಧಿ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರೆ ಅನೇಕ ನಾಯಕರು ಅವರಿಗೆ ಗೌರವ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 