ನೆರೆಹಾವಳಿಗೊಳಗಾದ ಸಂತ್ರಸ್ತರಿಗೆ ಅಗತ್ಯದ ಸೌಲಭ್ಯ ಒದಗಿಸಿ
ಗದಗ : ಮಲಪ್ರಭಾ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಪ್ರಮಾಣ ಹೆಚ್ಚಳದಿಂದ ನವೀಲುತೀರ್ಥ ಜಲಾಶಯದಿಂದ 22 ಸಾವಿರ ಕ್ಯೂಸೆಕ್ಸ ನೀರು ಹೊರಬಿಡಲಾಗುತ್ತಿದ್ದು ನೀರಿನ ಹೊರ ಹರಿವಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆವಿದ್ದು ಹಾಗೂ ಬೆಣ್ಣಿಹಳ್ಳದ ಪ್ರವಾಹದಿಂದಾಗಿ ನರಗುಂದ ತಾಲೂಕಿನ ಕೊಣ್ಣೂರು, ಹದಲಿ, ವಾಸನ, ಕಪಲಿ, ಬೂದಿಹಾಳ, ಬೆಳ್ಳೆರಿ, ಕುರ್ಲಗೇರಿ ಸುರಕೋಡ ಗ್ರಾಮಗಳು ಜಲಾವೃತಗೊಳ್ಳುವ ಸಂಭವವಿದ್ದು ಅವಶ್ಯಕ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು, ಭೂವಿಜ್ಞಾನ, ಅರಣ್ಯ, ಪರಿಸರ ಜೀವಿಶಾಸ್ತ್ರ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ ಸೂಚನೆ ನೀಡಿದರು.
ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳದ ಪ್ರವಾಹದಿಂದಾಗಿ ನೆರೆಹಾವಳಿ ಗೊಳಗಾದ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಸಚಿವರು ಜಲಾವೃತಗೊಂಡಂತಹ ಲಕಮಾಪುರ ಗ್ರಾಮಕ್ಕೆ ರಸ್ತೆ ಸಂಪರ್ಕ ಕಳೆದುಕೊಂಡಿದ್ದು ನೀರಿನಲ್ಲಿ ಸಿಲುಕಿರುವ ಸಂತ್ರಸ್ಥರಿಗೆ ಊಟ, ನೀರು ಹಾಗೂ ಅಗತ್ಯದ ಸೌಕರ್ಯಗಳನ್ನು ಪೂರೈಸಲು ಅವಶ್ಯಕ ಕ್ರಮ ಕೈಗೊಳ್ಳಲು ಸೂಚನೆ ನೀಡಿದ ಅವರು ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ಕೂಡಲೆ ಕ್ರಮ ಜರುಗಿಸಲು ಸೂಚಿಸಿದರು. ಮಲಪ್ರಭೆ ನದಿ ನೀರು ಹೊರಹರಿವಿನಿಂದ ಕೊಣ್ಣೂರು ಗ್ರಾಮಕ್ಕೆ ಮತ್ತೆ ನೀರು ನುಗ್ಗುವ ಸಾಧ್ಯತೆಯಿದ್ದು ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮನವಿ ಮಾಡಿದ ಅವರು ಸಂತ್ರಸ್ಥರಿಗೆ ಗಂಜಿ ಕೇಂದ್ರಗಳನ್ನು ಸ್ಥಾಪಿಸಲು ಸಚಿವರಾದ ಸಿ.ಸಿ.ಪಾಟೀಲ ಸೂಚಿಸಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿ.ಪಂ. ಸಿ.ಇ.ಓ ಡಾ. ಆನಂದ ಕೆ. ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ತಾ.ಪಂ. ಕಾರ್ಯನಿವರ್ಾಹಕ ಅಧಿಕಾರಿ ಕನಕರೆಡ್ಡಿ, ತಹಶೀಲ್ದಾರ ಯಲ್ಲಪ್ಪ ಗೊಣೆನ್ನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಸಂದರ್ಭದಲ್ಲಿ ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 