ಸರಕಾರದ ಯೋಜನೆ ಸದುಪಯೋಗಕ್ಕೆ ದಾಖಲೆ ಒದಗಿಸಿ : ಯಾಶೀರಖಾನ ಪಠಾಣ
Provide documentation for proper utilization of government schemes: Yashira Khan's plea
ಸರಕಾರದ ಯೋಜನೆ ಸದುಪಯೋಗಕ್ಕೆ ದಾಖಲೆ ಒದಗಿಸಿ : ಯಾಶೀರಖಾನ ಪಠಾಣ
ಶಿಗ್ಗಾವಿ 22: ಸರಕಾರದ ಯೋಜನೆಯ ಸದುಪಯೋಗ ಪಡಿಸಿಕೊಳ್ಳಲು ಅವಶ್ಯವಿರುವ ದಾಖಲೆಗಳನ್ನು ಒದಗಿಸಬೇಕು ಎಂದು ಶಾಸಕ ಯಾಶೀರಖಾನ ಪಠಾಣ ಹೇಳಿದರು. ಪಟ್ಟಣದ ಸರಕಾರಿ ಅಂಬೇಡ್ಕರ್ ಸಂಕೀರ್ಣದಲ್ಲಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಮಾತನಾಡಿದ ಅವರು ಸಾರ್ವಜನಿಕರು ಅಹವಾಲು ಸಲ್ಲಿಸಲು ಬರುವಾಗ ಸಂಬಂಧಪಟ್ಟ ದಾಖಲೆಗಳನ್ನು ಒದಗಿಸಿದಾಗ ಅಂತಹ ಅರ್ಜಿಗಳು ವಿಲೇವಾರಿ ಆಗುತ್ತವೆ ಇಲ್ಲದೇ ಹೋದರೆ ತಿರಸ್ಕೃತ ಗೊಳ್ಳುತ್ತವೆ ಆದ್ದರಿಂದ ಸಾರ್ವಜನಿಕರು ಅರ್ಜಿ ಸಲ್ಲಿಸುವಾಗ ದಾಖಲೆಗಳನ್ನು ಒದಗಿಸಿದರೆ ನಾನು ಅಧಿಕಾರಿಗಳಿಗೆ ಕೆಲಸ ಮಾಡಿ ಕೊಡಲು ಹೇಳಬಹುದು. ಇಲ್ಲದೇ ಹೋದರೆ ಕಷ್ಟಸಾಧ್ಯವಾಗುತ್ತದೆ ಎಂದು ಹೇಳಿದರು. ಆದರೂ ಸಹಿತ ಸಂಬಂಧಪಟ್ಟ ಅಧಿಕಾರಿಗಳಿಗೆ ಕಡು ಬಡವರ ನಿರ್ಗತಿಕರ ವಿಧವೆಯರನ್ನು ಪದೇ ಪದೇ ಅಲೆದಾಡಿಸದೇ ಅವರ ಕೆಲಸಗಳನ್ನು ಮಾಡಿ ಕೊಡಲು ಸೂಚಿಸಿದರು. ಈ ಸಂದರ್ಭದಲ್ಲಿ ತಹಶಿಲ್ದಾರ ರವಿ ಕೊರವರ, ಪುರಸಭೆ ಸದಸ್ಯ ಗೌಸಖಾನ ಮುನಶಿ, ಕೆ.ಎಂ.ಎಫ್ ನಾಮ ನಿರ್ದೇಶಕ ಸದಸ್ಯ ಶಂಕರಗೌಡ ಪಾಟೀಲ,ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಬಾಬರ ಬೋವಾಜಿ, ಅತ್ತಾವುಲ್ಲಾಖಾನ ಖಾಜೇಖಾನವರ, ಸಂತೋಷ ಚಾಕಲಬ್ಬಿ, ಮುನ್ನಾ ಮಾಲ್ದಾರ, ಸಾಧಿಕ ಮಲ್ಲೂರ, ಆಶೀಫ್ ಮೊಹ್ಮದಸಾಬನವರ, ಸರತಾಜ ಹಾನಗಲ್ಲ, ಶಿವಾನಂದ ಕುನ್ನೂರ, ಹನುಮಂತಪ್ಪ ಭಾರಂಗಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 